ಹನುಮಸಾಗರ: ಗ್ರಾಪಂ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.
ಗ್ರಾಪಂ ಪಂಚಾಯಿತಿ ಕಟ್ಟೆಯಲ್ಲಿ ಫಲಾನುಭವಿಗಳಿಗೆ ಗುಂಪು ಆಶ್ರಯ ಮನೆಗಳ ನಿವೇಶನದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. ಸದಸ್ಯರು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ. ರೈತರಿಗೆ ಅನುಕೂಲ ಆಗುವಂತೆ ನರೇಗಾದಡಿ ರಸ್ತೆಗಳನ್ನು ಅಭಿವೃದ್ಧಿ ಮಾಡಬೇಕು. ಸಿಸಿ ರಸ್ತೆ ಜತೆಗೆ ಚರಂಡಿ ನಿರ್ಮಿಸಬೇಕು. ಇದರಿಂದ ಸ್ವಚ್ಛತೆ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಬೇಕೆಂದು ಸಲಹೆ ನೀಡಿದರು.