More

    ಅಶ್ಲೀಲ ಫೋಟೋ ಹರಿಬಿಡುವುದಾಗಿ ಯುವಕನಿಂದ ಕಿರುಕುಳ-ಯುವತಿ ಆತ್ಮಹತ್ಯೆ

    ಭಟ್ಕಳ: ಅಶ್ಲೀಲ ಫೋಟೋಗಳನ್ನು ಹರಿಬಿಡುವುದಾಗಿ ಬೆದರಿಸುತ್ತಿದ್ದ ಇನ್ಸ್‌ಸ್ಟಾಗ್ರಾಂ ಗೆಳೆಯನ ಕಿರುಕುಳದಿಂದ ಬೇಸತ್ತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಭಟ್ಕಳ ತಾಲೂಕಿನ ಕೊಡಮಕ್ಕಿ, ಹಾಡವಳ್ಳಿಯಲ್ಲಿ ಬುಧವಾರ ಘಟನೆ ನಡೆದಿದ್ದು, ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಕೋಡಮಕ್ಕಿಯ ನೇತ್ರಾ ಮುತ್ತಯ್ಯ ಗೋವಾಳಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಭಟ್ಕಳದ ವಕೀಲರ ಕಚೇರಿಯಲ್ಲಿ ಆಕೆ ಕೆಲಸ ಮಾಡಿಕೊಂಡಿದ್ದಳು.

    ಮುಂಡಳ್ಳಿ ನಿವಾಸಿ ಗೋವರ್ಧನ ಮೊಗೇರ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿ ನಂತರ ಗೆಳೆತನ ಮಾಡಿಕೊಂಡಿದ್ದ. ಇಬ್ಬರ ನಡುವೆ ಉತ್ತಮ ಸ್ನೇಹ, ಸಲುಗೆ ಇತ್ತು. ಆದರೆ, ಕೆಲ ದಿನಗಳಿಂದ ಗೋವರ್ಧನ ತಾನು ನಿನಗಾಗಿ ಖರ್ಚು ಮಾಡಿದ ಹಣ ಕೊಡುವಂತೆ ಕರೆ ಮಾಡಿ ಹೆದರಿಸಿ ಚಿತ್ರಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಇಲ್ಲದೇ ಇದ್ದರೆ ನಿನ್ನ ಅಶ್ಲೀಲ ಫೋಟೋಗಳನ್ನು ತಾನು ಫೇಸ್‌ ಬುಕ್‌ನಲ್ಲಿ ಹಾಕಿ ನಿನ್ನ ಮಾನ ಮರ್ಯಾದೆ ತೆಗೆಯುತ್ತೇನೆ. ನಿನ್ನನ್ನು ಸಾಯಿಸುತ್ತೇನೆ. ಮರ್ಯಾದೆಗೆ ನೀನೆ ಸಾಯಬೇಕು ಎಂದು ಹೇಳಿ ಪ್ರಚೋದನೆ ನೀಡಿದಕ್ಕೆ ಮನನೊಂದ ಯುವತಿ ತನ್ನ ಹಳೆಯ ಮನೆಯಲ್ಲಿ ಕುತ್ತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ನಮೂದಿಸಲಾಗಿದೆ.

    ಗೋವರ್ಧನ ಮೊಗೇರ ತನ್ನ ಮಗಳ ಸಾವಿಗೆ ಕಾರಣ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣ ಠಾಣೆಯಲ್ಲಿ ಮೃತಳ ತಂದೆ ತಂದೆ ಮುತ್ತಯ್ಯ ಗೋವಾಳಿ ದೂರು ನೀಡಿದ್ದಾರೆ. 

    ದೂರು ದಾಖಲಿಸಿಕೊಂಡ ಗ್ರಾಮೀಣ ಠಾಣೆಯ ಪಿಎಸ್ಐ ಶ್ರೀಧರ ನಾಯ್ಕ ಮೃತ ಯುವತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

    ಇದನ್ನೂ ಓದಿ: ಮುಂಬೈನಲ್ಲಿ ಪತ್ತೆಯಾದ ಭಟ್ಕಳದ ವೈದ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts