ಆತ ಒಬ್ಬ ಪ್ರಮುಖ ಆಟಗಾರ; ಬಾಂಗ್ಲಾ ವಿರುದ್ಧ ಗೆಲುವಿನ ಬಳಿಕ ಹಾರ್ದಿಕ್​ ಪಾಂಡ್ಯರನ್ನು ಹಾಡಿಹೊಗಳಿದ ರೋಹಿತ್​ ಶರ್ಮಾ

blank

ಅಂಟಿಗುವಾ: ಇಲ್ಲಿನ ಸರ್​​ ವಿವಿಯನ್​ ರಿಚರ್ಡ್​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶವಕಪ್​ ಸೂಪರ್​ 08 ಪಂದ್ಯದಲ್ಲಿ ಟೀಮ್​ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸಿದ್ದು, ಸೆಮಿಫಯನಲ್​ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಬಾಂಗ್ಲದೇಶ ವಿರುದ್ಧದ ಪಂದ್ಯದಲ್ಲಿ 50 ರನ್​ಗಳ ಭರ್ಜರಿ ಜಯ ಸಾಧಿಸಿದರ ಕುರಿತು ಮಾತನಾಡಿರುವ ಟೀಮ್​ ಇಂಡಿಯಾ ರೋಹಿತ್​ ಶರ್ಮಾ ಸಹ ಆಟಗಾರ ಹಾರ್ದಿಕ್​ ಪಾಂಡ್ಯರನ್ನು ಹಾಡಿ ಹೊಗಳಿದ್ದಾರೆ.

17ನೇ ಆವೃತ್ತಿ ಐಪಿಎಲ್​ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್​ ತಂಡದಲ್ಲಿನ ನಾಯಕತ್ವ ಬಿಕ್ಕಟ್ಟಿನ ವಿಚಾರವಾಗಿ ಈ ಇಬ್ಬರು ಆಟಗಾರರ ನಡುವೆ ಬಿರುಕು ಉಂಟಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ನಿದರ್ಶನಗಳು ನಮ್ಮ ಕಣ್ಣ ಮುಂದಿದ್ದವು. ಆದರೆ, ಅದನ್ನು ಮರೆತಂತೆ ಕಾಣುತ್ತಿರುವ ರೋಹಿತ್​ ಹಾರ್ದಿಕ್​ ಪಾಂಡ್ಯರನ್ನು ಹಾಡಿ ಹೊಗಳಿದ್ದಾರೆ. ಈ ಬಗ್ಗೆ ಪೋಸ್ಟ್​ ಮ್ಯಾಚ್​ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ್ದಾರೆ.

ನಾವು ಇಂದಿನ ಪಂದ್ಯದಲ್ಲಿ ತುಂಬಾ ಚೆನ್ನಾಗಿ ಆಡಿದ್ದೇವೆ. ಬ್ಯಾಟಿಂಗ್ ಮತ್ತು ಬೌಲಿಂಗ್​ನಲ್ಲಿ ಸಾಂಘಿಕ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಒಂದು ಯೋಜನೆಯನ್ನು ಪರಿಸ್ಥಿತಿಗೆ ತಕ್ಕಂತೆ ಕಾರ್ಯರೂಪಕ್ಕೆ ತರುವುದು ಮುಖ್ಯವಾಗುತ್ತದೆ. ಹೀಗಾಗಿ ನಮ್ಮ ತಂಡದ ಪ್ರದರ್ಶನ ತೃಪ್ತಿ ನೀಡಿದೆ. ನನ್ನ ಪ್ರಕಾರ, ಟಿ20 ಕ್ರಿಕೆಟ್​ನಲ್ಲಿ ಎಲ್ಲಾ ಬ್ಯಾಟರ್​ಗಳು ಅರ್ಧಶತಕ ಗಳಿಸಬೇಕೆಂದಿಲ್ಲ. ಒಬ್ಬ ಬ್ಯಾಟರ್ ಅರ್ಧಶತಕ ಬಾರಿಸಿದರೂ ನಾವು 196 ರನ್​ಗಳಿಸಿದ್ದೇವೆ.​ ಹೀಗಾಗಿ ಇದೇ ಮಾದರಿಯಲ್ಲಿ ನಮ್ಮ ಆಟ ಮುಂದುವರೆಯಬೇಕೆಂದು ನಾನು ಬಯಸುತ್ತೇನೆ.

Rohit Sharma

ಇದನ್ನೂ ಓದಿ: ನಿನ್ನನ್ನು ನಾಯಕನನ್ನಾಗಿ ಮಾಡಿದ ಐನ್​ಸ್ಟೈನ್​ನನ್ನು ನೋಡುವ ಆಸೆಯಾಗಿದೆ; ಬಾಬರ್​ ವಿರುದ್ಧ ಮಾಜಿ ಕ್ರಿಕೆಟಿಗ ವಾಗ್ದಾಳಿ

ನಮ್ಮ ತಂಡದಲ್ಲಿ ಸಾಕಷ್ಟು ಅನುಭವಿ ಆಟಗಾರರಿದ್ದಾರೆ. ಅದರಲ್ಲೂ ಹಾರ್ದಿಕ್ ಪಾಂಡ್ಯ ಅತ್ಯುತ್ತಮವಾಗಿ ಆಡುತ್ತಿದ್ದಾರೆ. ಟಾಪ್- 5, 6 ಬ್ಯಾಟರ್​ಗಳ ಬಳಿಕ ಹಾರ್ದಿಕ್ ಉತ್ತಮವಾಗಿ ಬ್ಯಾಟಿಂಗ್​ ಮಾಡುತ್ತಿರುವುದರಿಂದ ಅಂತಿಮ ಓವರ್​ಗಳಲ್ಲಿ ದೊಡ್ಡ ಸ್ಕೋರ್​ ಗಳಿಸುತ್ತಿದ್ದೇವೆ. ಹಾರ್ದಿಕ್​ ಅವರ ಸಾಮರ್ಥ್ಯ ಏನೆಂದು ನಮಗೆ ತಿಳಿದಿದೆ. ಅವರು ನಮಗೆ ಬಹಳ ಮುಖ್ಯವಾದ ಆಟಗಾರ. ಪಾಂಡ್ಯ ಇದೇ ಆಲ್​ರೌಂಡರ್​ ಆಟವನ್ನು ಮುಂದುವರಿಸಿದರೆ, ನಾವು ಮುಂದಿನ ಹಂತಕ್ಕೇರುವುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದ್ದಾರೆ.

ನಮ್ಮ ಬೌಲರ್​ಗಳು ಸಹ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡು ಚೆನ್ನಾಗಿ ಬೌಲಿಂಗ್ ಮಾಡಿದ್ದಾರೆ. ಇದೇ ರೀತಿ ನಮ್ಮ ಪ್ರದರ್ಶನ ಮುಂದುವರೆದರೆ ಮುಂದಿನ ಹಂತಕ್ಕೇರಲು ನಮಗೆ ಸುಲಭವಾಗುತ್ತದೆ. ಹೀಗಾಗಿ ನಮ್ಮ ಆಟಗಾರರಿಂದ ನಾನು ಇಂತಹ ಪ್ರದರ್ಶನವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್​​ ಶರ್ಮಾ ಪೋಸ್ಟ್​ ಮ್ಯಾಚ್​ ಪ್ರೆಸೆಂಟೇಷನ್​ನಲ್ಲಿ ಹೇಳಿದ್ದಾರೆ.

Share This Article

ಮನೆಯಲ್ಲೇ ಮಾಡಿ ಟೇಸ್ಟಿ ಸ್ಪೈಸಿ ಬಟರ್ ಕಿಚಡಿ; ಇಲ್ಲಿದೆ ಸಿಂಪಲ್​ ವಿಧಾನ | Recipe

ಪ್ರತಿ ಬಾರಿ ಮನೆಯಲ್ಲಿ ಸಿಂಪಲ್ ಕಿಚಡಿ ತಿಂದು ಬೇಜಾರಾಗಿದ್ಯಾ. ವಿಶೇಷ ರೀತಿಯ ಹೋಟೆಲ್​ ಸ್ಟೈಲ್​ ಟೇಸ್ಟಿ…

ತುಪ್ಪ ಸೇವಿಸಿದರೆ ಪಿರಿಯಡ್ಸ್​ ನೋವು ಇರುವುದಿಲ್ಲವೇ; ತಜ್ಞರು ಹೇಳೋದೇನು? | Health Tips

ಋತುಚಕ್ರದ ಸಮಯದಲ್ಲಿ ಮಹಿಳೆಯರು ಸಾಮಾನ್ಯವಾಗಿ ನೋವು, ಉಬ್ಬುವುದು ಮತ್ತು ಹೆಪ್ಪುಗಟ್ಟುವಿಕೆಯಂತಹ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಮಸ್ಯೆಗಳನ್ನು…

ಜಿಮ್​​ಗೆ ಹೋಗದೆ ಮನೆಯಲ್ಲೆ ಮಾಡಿ ಈ 3 ವ್ಯಾಯಾಮ; ಸ್ಲಿಮ್​ ಆಗಲು ಈ ಟಿಪ್ಸ್​​​ | Health Tips

ಸಿನಿಮಾ ನಟಿಯರನ್ನು ನೋಡಿ ನನಗೂ ಅವರಂತಹ ದೇಹಾಕೃತಿ ಇದ್ದಿದ್ದರೆ ಚೆನ್ನಾಗಿರುತಿತ್ತು ಎಂದು ಅನಿಸುತ್ತದೆಯೇ? ಹೌದು ಎಂದಾದರೆ…