More

    ಅಮೃತ ಮಹೋತ್ಸವ ಮುಂದಿನ ಚುನಾವಣೆಗೆ ದಿಕ್ಸೂಚಿ

    ಹರಪನಹಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವದ ಕಾರ್ಯಕ್ರಮ 2023ನೇ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮನಾಯ್ಕ ಹೇಳಿದರು.

    ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಸರ್ಕಾರದ ಜನವಿರೋಧಿ ಆಡಳಿತದಿಂದ ಬೇಸರಗೊಂಡಿರುವ ಮತದಾರರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಪಕ್ಷದಲ್ಲಿ ಯಾರೂ ಸನ್ಯಾಸಿಗಳಲ್ಲ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದು ಹೈಕಮಾಂಡ್ ಹೇಳುತ್ತದೆ ಎಂದರು.

    ಭಾಗ್ಯಗಳ ಸರದಾರ ಆಗಿರುವ ಸಿದ್ದರಾಮಯ್ಯ 75ನೇ ವಸಂತಗಳ ನೆನಪಿನಲ್ಲಿ ಅವರ ರಾಜಕೀಯ ಜೀವನದ ಕೊಡುಗೆಗಳನ್ನು ಸ್ಮರಿಸುವುದು ಮತ್ತು ಸಂವಿಧಾನ ಹಾಗೂ ಕಾಂಗ್ರೆಸ್ ಪಕ್ಷವನ್ನು ಉಳಿಸಲು ಈ ಅಮೃತ ಮಹೋತ್ಸವ ಸಮಾರಂಭ ಸಾಕ್ಷಿಯಾಗಲಿದೆ ಎಂದರು.

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ.ಲತಾ, ಕಾಂಗ್ರೆಸ್ ಪಕ್ಷದ ಜಿಲ್ಲಾದ್ಯಕ್ಷ ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ, ಪ್ರಮುಖರಾದ ಪ್ರೇಮಕುಮಾರ, ಎಂ.ವಿ.ಅಂಜಿನಪ್ಪ, ಲಾಟಿ ದಾದಪೀರ, ಉದ್ದಾರ ಗಣೇಶ್, ಭರತೇಶ್ ಜೋಗಿನ್ನರ, ಎಚ್.ಬಿ.ಪರಶುರಾಮಪ್ಪ, ಎಚ್.ಕೆ.ಹಾಲೇಶ್, ಮುತ್ತಿಗಿ ಜಂಬಣ್ಣ, ಚಿಕ್ಕೇರಿ ಬಸಪ್ಪ, ಎ.ಮೂಸಾಸಾಬ್, ಬಸವರಾಜ ಮತ್ತೂರು, ಬಾಣದ ಅಂಜಿನಪ್ಪ, ತೆಲಿಗಿ ಉಮಾಕಾಂತ, ಟಿ.ಮಂಜುನಾಥ, ಸಾಸ್ವಿಹಳ್ಳಿ ನಾಗರಾಜ, ತಿಮ್ಮಣ್ಣ, ಬಸವರಾಜ, ನವರಂಗ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts