More

    ಹರ್ಷನ ಹತ್ಯೆ ಪ್ರಕರಣ: ಬಂಧಿತ 10 ಜನ ಆರೋಪಿಗಳು 11 ದಿನ ಪೊಲೀಸರ ವಶಕ್ಕೆ

    ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ 10 ಜನ ಆರೋಪಿಗಳನ್ನು 11 ದಿನ ಪೊಲೀಸರ ಕಸ್ಟಡಿಗೆ ನೀಡಿ ಶಿವಮೊಗ್ಗದ ಎರಡನೇ ಜೆಎಂಎಫ್​ಸಿ ನ್ಯಾಯಾಲಯವು ಆದೇಶಿಸಿದೆ. ಫೆಬ್ರವರಿ 20ರ ರಾತ್ರಿ ನಡೆದ ಹರ್ಷ ಕೊಲೆ ಪ್ರಕರಣದಲ್ಲಿ ಇದುವರೆಗೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಎರಡನೇ ಜೆಎಂಎಫ್​ಸಿ ನ್ಯಾಯಾಧೀಶರಾದ ಶ್ರೀಮತಿ ಸಮ್ಮತಿರವರು, ಮಾರ್ಚ್ 7ರ ತನಕ ಆರೋಪಿಗಳನ್ನು ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ. ಇಂದು ಸಿಇಎನ್ ಠಾಣೆ ಪೊಲೀಸ್​ ಇನ್ಸ್​ಪೆಕ್ಟರ್​ ಗುರುರಾಜ್, ಬಂಧಿತ ಎಲ್ಲ 10 ಜನ ಆರೋಪಿಗಳನ್ನು ಶಿವಮೊಗ್ಗದ ಎರಡನೇ ಜೆಎಂಎಫ್​ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರ ಮುಂದೆ ಪೊಲೀಸರು, ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕಾಗಿದೆ. ಹೀಗಾಗಿ 15 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದರು.

    ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ನ್ಯಾಯಾಧೀಶರು ಮಾರ್ಚ್ 7ರ ತನಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಎಲ್ಲ 10 ಮಂದಿ ಬಂಧಿತರನ್ನು ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ, ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರೀತಿಯ​ ಪುತಿನ್​ ನಾನು ನಿನ್ನ ತಾಯಿಯಾಗಿದ್ದರೆ… ವೈರಲ್​ ಆಯ್ತು ಅಮೆರಿಕ ನಟಿಯ ವಿಡಿಯೋ ಸಂದೇಶ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts