ಮಂಗಳೂರು: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಗೆ ಕಳೆದ ಆರು ವರ್ಷಗಳಿಂದ ಇದ್ದ ಹಗೆತನವೇ ಕಾರಣವಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಪೂರಕವೆಂಬಂತೆ ಒಂದಷ್ಟು ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಹರ್ಷ 2015ರಲ್ಲಿ ಪ್ರವಾದಿ ಮಹಮ್ಮದ್ ಹಾಗೂ ಅಲ್ಲಾ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಎಂದು ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ಬುಕ್ ಪೇಜ್ನಲ್ಲಿ ಬರೆಯಲಾಗಿದೆ.
ಇದನ್ನೂ ಓದಿ: ಮಸೀದಿ-ಮಂದಿರಗಳ ಧ್ವನಿವರ್ಧಕದ ಶಬ್ದ ತಗ್ಗಿಸದಿದ್ದರೆ ಕಾನೂನುಕ್ರಮ: ಪೊಲೀಸ್ ಕಮಿಷನರ್
ಅಲ್ಲದೆ ‘ಪ್ರವಾದಿ ನಿಂದನೆ ಮಾಡಿದ ಯಾರೇ ಆದರೂ ಅವರ ಆಯುಷ್ಯ ಎಷ್ಟೇ ಪ್ರಭಾವಿಯಾದರೂ ವೃದ್ಧಿ ಆಗದು..’ ಎಂದು ಅದೇ ಪೇಜ್ನಲ್ಲಿ ಬರೆಯಲಾಗಿದ್ದು, ಹರ್ಷ ಅದೇ ಸೇಡಿಗೆ ಕೊಲೆಯಾಗಿರಬಹುದಾ ಎಂಬ ಅನುಮಾನವನ್ನು ಮೂಡಿಸಿದೆ.
ಪ್ರವಾದಿ ನಿಂದನೆ ಮಾಡಿದವರನ್ನು ಎಂದಿಗೂ ಬಿಡಲ್ಲ ಎಂದು ಮಂಗಳೂರು ಮುಸ್ಲಿಮ್ಸ್ ಫೇಸ್ಬುಕ್ ಪೇಜ್ನಲ್ಲಿ ಎಚ್ಚರಿಕೆ ನೀಡಿದ ಕುರಿತು ಇದೀಗ ಮಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.
ಸಿಡಿದೆದ್ದ ಹಿಂದೂಪರ ಕಾರ್ಯಕರ್ತರು: ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ
ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…