More

    ಚನ್ನರಾಯಪಟ್ಟಣ ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು

    ಹಾಸನ: ಜಿಲ್ಲೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.

    ಕಿರಣ್​ ಮೃತ ಎಸ್​​ಐ. ಇವರು ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡದಿಂದ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

    ಇದನ್ನೂ ಓದಿ: ವೋಟು ಹಾಕಿ ಪತ್ನಿ ಗೆಲ್ಲಿಸಿದ ತಪ್ಪಿಗೆ ಭಯಪಡುತ್ತಿರುವ ಜನ: ಬಟ್ಟೆ ಬಿಚ್ಚಿಕೊಂಡು ಬೀದಿಯಲ್ಲಿ ರಂಪಾಟ

    ಚನ್ನರಾಯಪಟ್ಟಣ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಕಿರಣ್​ ಅವರು ಪರಿಶೀಲನೆ ನಡೆಸಿದ್ದರು. ಆದರೆ, ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿರುವುದು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ಪೊಲೀಸ್ ಅಧಿಕಾರಿಯ ಸೂಸೈಡ್​ನಿಂದ ಪೊಲೀಸ್ ಇಲಾಖೆ ಇದೀಗ ಆತಂಕಕ್ಕೀಡಾಗಿದೆ. ಆತ್ಮಹತ್ಯೆ ಸಂಬಂಧ ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. (ದಿಗ್ವಿಜಯ ನ್ಯೂಸ್​)

    ಮಕ್ಕಳ ಮುಂದೆ ಬೆತ್ತಲಾದ ರೆಹಾನಾಳನ್ನು ಬಿಡದ ಸಂಕಷ್ಟ: ಸುಪ್ರೀಂನಲ್ಲೂ ಶಾಕ್​ ಆಗುವ ಸಾಧ್ಯತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts