More

    ಡಿ. 14 ರಂದು ರಿಲಯನ್ಸ್ ಸಂಸ್ಥೆ ಮುಂದೆ ರೈತರ ಪ್ರತಿಭಟನೆ

    ಹಾಸನ: ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರಬಲ ಹೋರಾಟದ ಅನಿವಾರ್ಯತೆ ಇದ್ದು, ಡಿ. 14 ರಂದು ರಿಲಯನ್ಸ್ ಸಂಸ್ಥೆ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಆನೆಕೆರೆ ರವಿ ತಿಳಿಸಿದರು.

    ರೈತರ ಪಾಲಿಗೆ ಮರಣ ಶಾಸನ ಬರೆದಿರುವ ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುವ ಮೂಲಕ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅನ್ನದಾತರಿಗೆ ಮೋಸ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.

    ರೈತರ ಹೆಸರಿನಲ್ಲಿ ಅಧಿಕಾರ ಅನುಭವಿಸಿದ ಜೆಡಿಎಸ್ ನಾಯಕರು ರಾಜಕೀಯ ಲಾಭಕ್ಕಾಗಿ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿರುವುದರ ಅರಿವು ಜೆಡಿಎಸ್‌ಗೆ ಇಲ್ಲ. 1999ರಲ್ಲಿ ಆದ ಗ್ಯಾಟ್ ಒಪ್ಪಂದದಿಂದ ಕೃಷಿ ಸಮುದಾಯ ಅನುಭವಿಸಿದ ಹೊಡೆತ ಅಷ್ಟಿಷ್ಟಲ್ಲ. ಅದೇ ಅನಾಹುತ ಮತ್ತೆ ಸಂಭವಿಸುಬಹುದು ಎಂಬ ಆತಂಕ ಎಲ್ಲರನ್ನು ಕಾಡುತ್ತಿದೆ. ಆದ್ದರಿಂದ ದೇಶದ ಕೋಟ್ಯಂತರ ರೈತರು ಬೀದಿಗಿಳಿದಿದ್ದಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts