More

    ಕೇವಲ 2 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ​ ಪೇದೆಯ ಅಕಾಲಿಕ ಮರಣದಿಂದ ಮುಗಿಲು ಮುಟ್ಟಿದ ಆಕ್ರಂದನ

    ಹಾಸನ: ಐದು ದಿನಗಳ ಹಿಂದೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೊಲೀಸ್​ ಕಾನ್ಸ್​ಟೇಬಲ್​ ಚಿಕಿತ್ಸೆ ಫಲಕಾರಿಯಾಗದೇ ಇಂದು (ಬುಧವಾರ) ಸಾವಿಗೀಡಾಗಿದ್ದಾರೆ.

    ಇದನ್ನೂ ಓದಿ: ಸಮುದಾಯ ಭವನದ ಕೀ ಕೇಳಿದ್ದೇ ತಪ್ಪಾ? ಪೊಲೀಸ್​ ಎಂದು ನೋಡದೆ ಶಿಕ್ಷಕ ಹೀಗೆ ಮಾಡ್ಬೋದಾ?

    ಮೋಹನ್ ಕುಮಾರ್(32) ಮೃತ ದುರ್ದೈವಿ. ಐದು ದಿನದ ಹಿಂದೆ ಬೈಕ್​ನಲ್ಲಿ ಪೊಲೀಸ್​ ಠಾಣೆಗೆ ಹೋಗುವಾಗ ಹಾಸನದ ಕಂದಲಿ ಬಳಿ ಅಪಘಾತವಾಗಿತ್ತು. ತಕ್ಷಣ ಚಿಕಿತ್ಸೆಗಾಗಿ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

    ಮೋಹನ್​ ಕುಮಾರ್​ ಅವರಿಗೆ ಕೇವಲ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಕರೊನಾ ಲಾಕ್‌ಡೌನ್ ಆದಾಗಿನಿಂದ ಮೋಹನ್​ ನಿರಂತರವಾಗಿ ಸೇವೆ ಸಲ್ಲಿಸಿದ್ದರು. ಇದೀಗ ಅವರ ಅಕಾಲಿಕ ಮರಣದಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿ: ಸಿಆರ್​ಪಿಎಫ್​ ಯೋಧನ ಕುಟುಂಬದ ಮೇಲೆ ರಮೇಶ್​ ಜಾರಕಿಹೊಳಿ ಬೆಂಬಲಿಗರಿಂದ ಹಲ್ಲೆ ಆರೋಪ

    ಇಪಿಎಫ್​ ಬಗ್ಗೆ ಚಿಂತೆ ಬೇಡ, ಇನ್ನೂ 3ತಿಂಗಳು ಕೇಂದ್ರವೇ ಪಾವತಿಸುತ್ತದೆ: ನಿರ್ಮಲಾ ಸೀತಾರಾಮನ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts