ಹಾಸನ: ಆಲೂರು ತಾಲೂಕಿನ ಹೊಂಕರವಳ್ಳಿ ಸಮೀಪದ ನಂದೀಶ್ವರ ಎಸ್ಟೇಟ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಶನಿವಾರ ರಾತ್ರಿ ದಾಳಿ ನಡೆಸಿ ನೂರಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.
ಸುಮಾರು ನೂರು ಐಷಾರಾಮಿ ಕಾರು, ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಬಂದು ಪಾರ್ಟಿಯಲ್ಲಿ ತೊಡಗಿದ್ದವರಿಂದ ಮಾದಕ ವಸ್ತುಗಳ ಬಳಕೆ ಮಾಹಿತಿ ಆಧರಿಸಿ ತಡ ರಾತ್ರಿ ರೇಡ್ ನಡೆಸಲಾಗಿದೆ.
ಇದನ್ನೂ ಓದಿರಿ: ನಿಮ್ಮ ಬದುಕಿನ ನಾಯಕ ನೀವೇ ಆಗಿರಿ…: ಸೆಲೆಬ್ರಿಟಿ ಕಾರ್ನರ್ನಲ್ಲಿ ರವಿ ಡಿ. ಚನ್ನಣ್ಣನವರ್
ವಶಕ್ಕೆ ಪಡೆದವರನ್ನು ಆಲೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿರಿಸಿ ವಿಚಾರಣೆ ನಡೆಸಲಾಗುತ್ತಿದೆ. ಗಾಂಜಾ ಮುಂತಾದ ಮಾದಕ ವಸ್ತುಗಳು ದೊರಕಿದ್ದು, ಕಾರ್ಯಕ್ರಮ ಆಯೋಜಕರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.
ಸೋಲಿನ ಬೆನ್ನಲ್ಲೇ ಸಿಎಸ್ಕೆ ತಂಡಕ್ಕೆ ಮತ್ತೊಂದು ಶಾಕ್: ನಾಯಕ ಧೋನಿಗೆ 12 ಲಕ್ಷ ರೂ. ದಂಡ
ರಾತ್ರಿ ಊಟ ಮಾಡ್ಕೊಂಡು ಮಲಗಿದ ಮೂವರು ಸಹೋದರಿಯರು ಬೆಳಗಾಗುವಷ್ಟರಲ್ಲಿ ನಾಪತ್ತೆ..!