ಹಾಸನ: ತಾನು ಪ್ರೀತಿಸಿದ್ದ ಯುವತಿ ಪ್ರೀತಿಗೆ ನಿರಾಕರಿಸಿದಳೆಂಬ ಸಿಟ್ಟಿನಿಂದ ಪಾಗಲ್ ಪ್ರೇಮಿ ಯುವತಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದಿರುವ ಘಟನೆ ಹಾಸನದ ಸಕಲೇಶಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ‘ಕಾಂಗ್ರೆಸ್ಗೆ ಅಂಬೇಡ್ಕರ್ ಶಾಪ ತಟ್ಟಿದೆ; ಕಂಬ ನಿಲ್ಲಿಸಿದರೂ ಗೆಲ್ಲುತ್ತಿದ್ದ ಪಕ್ಷಕ್ಕೆ ಕ್ಷೇತ್ರವೇ ಇಲ್ಲದಂತಾಗಿದೆ’
ಸುಷ್ಮಿತಾ (21) ಹತ್ಯೆಗೀಡಾದ ಯುವತಿ. ಈಕೆಯನ್ನು ಅದೇ ಗ್ರಾಮದ ಹೇಮಂತ್ (25) ಹೆಸರಿನ ಯುವಕ ಪ್ರೀತಿಸುತ್ತಿದ್ದನಂತೆ. ಆದರೆ ಯುವತಿ ಪ್ರೀತಿಗೆ ಒಲ್ಲೆ ಎಂದಿದ್ದಾಳೆ. ಅದೇ ಸಿಟ್ಟಿನಿಂದ ಹೇಮಂತ್ ಆಕೆಯನ್ನು ಕೊಲೆ ಮಾಡುವ ನಿರ್ಧಾರ ಮಾಡಿದ್ದಾನೆ.
ಇದನ್ನೂ ಓದಿ: ಏಕಾಂತದಲ್ಲಿದ್ದಾಗ ಮನೆಗೆ ನುಗ್ಗಿ ವಿಡಿಯೋ ಮಾಡಿಕೊಂಡ! ಸೆಕ್ಸ್ಗೆ ಒಪ್ಪದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿದ
ಗುರುವಾರದಂದು ಯುವತಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದು ಬರುತ್ತಿರುವಾಗ ಏಕಾಏಕಿ ಆಕೆಯ ಮೇಲೆ ಹೇಮಂತ್ ದಾಳಿ ನಡೆಸಿದ್ದಾನೆ. ಮಚ್ಚಿನಿಂದ ಆಕೆಯನ್ನು ಮನಬಂದಂತೆ ಕೊಚ್ಚಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್)
ಮೆನೋಪಾಸ್ ನಂತರ ಪತ್ನಿಗೆ ಲೈಂಗಿಕಾಸಕ್ತಿಯೇ ಇಲ್ಲ- ನನಗೆ ದಿಕ್ಕೇ ತೋಚದಾಗಿದೆ; ಇದಕ್ಕೆ ಪರಿಹಾರವಿಲ್ಲವೆ?
ನಾವಲ್ಲ, ಅಕ್ಕನೇ ತಂಗಿಯನ್ನ ಕೊಂದಿದ್ದು! ಆಮೇಲೆ ನನ್ನನ್ನೂ ಕೊಂದುಬಿಡಿ ಎಂದು ಬೇಡಿಕೊಂಡಳು!