More

    ‘ತನಿಖೆಯನ್ನು ಸಿಬಿಐಗೆ ವಹಿಸುವುದು ಬೇಕಿರಲಿಲ್ಲ’ ಎಂದ ಹಾಥರಸ್​ ರೇಪ್​ ಸಂತ್ರಸ್ತೆಯ ಅಣ್ಣ

    ಲಖನೌ: ಹಾಥರಸ್​ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣದ ತನಿಖೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸಿಬಿಐಗೆ ವಹಿಸಿದ್ದಾರೆ.

    ಆದರೆ ಮೃತ ಸಂತ್ರಸ್ತೆಯ ಅಣ್ಣ ಇದು ಬೇಡವಾಗಿತ್ತು ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಸ್​ ತನಿಖೆಯನ್ನು ಈಗಾಗಲೇ ಎಸ್​ಐಟಿ ನಡೆಸುತ್ತಿರುವುದರಿಂದ ಸಿಬಿಐಗೆ ವಹಿಸಿ ಎಂದು ನಾವು ಕೇಳಿರಲಿಲ್ಲ ಎಂದು ತಿಳಿಸಿದ್ದಾರೆ.

    ನಿನ್ನೆ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಹಾಥರಸ್​ಗೆ ಭೇಟಿ ನೀಡಿ, ಮೃತ ಸಂತ್ರಸ್ತೆಯ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಜಗತ್ತಿನ ಯಾವ ಶಕ್ತಿಯೂ ಈ ಕುಟುಂಬದ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

    ಹತ್ರಾಸ್​ ಪ್ರಕರಣ ಸಿಬಿಐ ತನಿಖೆಗೆ: ಸಿಎಂ ಯೋಗಿ ಶಿಫಾರಸು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts