ಹಾವೇರಿ: ಜಿಎಚ್ ಕಾಲೇಜ್ ಎದುರಿನ ಪಿಬಿ ರಸ್ತೆಯಲ್ಲಿ ವಾಹನಗಳು ವೇಗವಾಗಿ ಓಡಾಡುವ ಕಾರಣ ವಿದ್ಯಾರ್ಥಿಗಳು ರಸ್ತೆ ದಾಟುವಾಗ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ, ಈ ರಸ್ತೆಯಲ್ಲಿ ರಸ್ತೆ ಉಬ್ಬು ಅಳವಡಿಕೆಗೆ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಕಾಲೇಜ್ ಪ್ರಾಂಶುಪಾಲೆ ಸಂಧ್ಯಾ ಕುಲಕರ್ಣಿ ಅವರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದರು. ಜಿಲ್ಲಾ ಸಂಚಾಲಕ ಸಿದ್ದರಾಮೇಶ ಪಾಟೀಲ, ಸುದೀಪ ಎಂ.ಎನ್., ಕರಬಸ್ಸು ಹಳ್ಳಿ, ಇತರರಿದ್ದರು.