More

    ಅಗ್ನಿ ಅವಘಡ: ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿ

    ಹಾವೇರಿ: ಅಗ್ನಿ ಅವಘಡದಿಂದಾಗಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಭಾನುವಾರ ನಗರದ ಕಂದುವಾಡ ಓಣಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
    ಸದಾನಂದ ಸ್ವಾಮಿ ಎಂಬುವವರು ವಾಸವಿದ್ದ ಮನೆಯಲ್ಲಿ ದೀಪ ಹಚ್ಚಿದ ವೇಳೆ ಈ ಘಟನೆ ಸಂಭವಿಸಿದೆ. ಅಗ್ನಿ ಅವಘಡದಿಂದಾಗಿ ಮನೆಯಲ್ಲಿನ ವಸ್ತುಗಳು ಸುಟ್ಟು ಲಕ್ಷಾಂತರ ರೂ., ಹಾನಿ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಡೆಗಟ್ಟಿದ್ದಾರೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts