More

    ನಿಮ್ಮ ಶಾಸಕನಾಗಿಯೂ ಕೆಲಸ ಮಾಡುವೆ; ಸ್ಥಳೀಯ ಎಲ್ಲ ಸಮಸ್ಯೆ ಬಗೆಹರಿಸುವೆ; ಕಾರ್ಯಕರ್ತರಿಗೆ ಬಸವರಾಜ ಬೊಮ್ಮಾಯಿ ಭರವಸೆ

    ಹಾವೇರಿ: ನೀವೇ ಬಸವರಾಜ ಬೊಮ್ಮಾಯಿ ಎಂದು ಭಾವಿಸಿ ನನ್ನ ಪರವಾಗಿ ಕೆಲಸ ಮಾಡಿ. ನಾನು ಕೇವಲ ಸಂಸದನಾಗಿ ಕೆಲಸ ಮಾಡುವುದಿಲ್ಲ. ನಿಮ್ಮ ಶಾಸಕನಂತೆಯೂ ಕೆಲಸ ಮಾಡುವೆ. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ ಎಂದು ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕರ್ತರಿಗೆ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
    ನಗರದ ಕಾಗಿನೆಲೆ ರಸ್ತೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಹಾವೇರಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
    ವಿಧಾನಸಭೆ ಚುನಾವಣೆಯಲ್ಲಿ ಏನಾಯ್ತು ಎಂಬುದನ್ನು ಪಕ್ಕಕ್ಕಿಡಿ. ಸೋಲಿನಿಂದ ಪಾಠ ಕಲಿಯಬೇಕು. ಎಲ್ಲ ವರ್ಗದ ಜನರು ಬದಲಾವಣೆ ಬಯಸುತ್ತಿದ್ದಾರೆ. ಈ ಬಾರಿ ಹಾವೇರಿ ವಿಧಾನಸಭಾ ಕ್ಷೇತ್ರದಲ್ಲೇ ಅತಿ ಹೆಚ್ಚು ಲೀಡ್ ಬರುವಂತೆ ಕೆಲಸ ಮಾಡಿ. ನನಗೆ ಯಾರ ಬಗ್ಗೆಯೂ ದ್ವೇಷ ಇಲ್ಲ. ಎಲ್ಲರನ್ನೂ ಗೌರವಯುತವಾಗಿ, ಕಟಿಬದ್ಧವಾಗಿ ಕೆಲಸ ಮಾಡುತ್ತೇನೆ ಎಂದರು.
    ಸ್ಥಳೀಯವಾಗಿ ಏನೇ ಸಮಸ್ಯೆಗಳಿದ್ದರೂ ಹಿರಿಯರು ಬಗೆಹರಿಸುತ್ತಾರೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಳ ಹಂತಕ್ಕೆ ಹೋಗಿ ಒಂದೊಂದು ಮತವನ್ನೂ ಹಾಕಿಸಿ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ. ನೀವು ಏನೇ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕ ಮಾಡಬಹುದು ಎಂದರು.
    ನಾನು ಜಿಲ್ಲೆಗೆ ಹೊಸಬನೇನಲ್ಲ. ಹಲವಾರು ವರ್ಷಗಳಿಂದ ಹಲವಾರು ಚುನಾವಣೆಗಳನ್ನು ಮಾಡಿದ್ದೇನೆ. ನಾನು ಮಾಜಿ ಸಿಎಂ ಎಂದು ಎಂದೂ ಕೆಲಸ ಮಾಡಿಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವೆ ಎಂದು ಹೇಳಿದರು.
    ಸಭೆಯಲ್ಲಿ ಮಾಜಿ ಶಾಸಕ ಶಿವರಾಜ ಸಜ್ಜನರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಜಗದೀಶ ಬಸೇಗೆಣ್ಣಿ, ನಿರಂಜನ ಹೆರೂರ, ಕರಬಸಪ್ಪ ಹಳದೂರ, ಪ್ರಭು ಹಿಟ್ನಳ್ಳಿ, ಜಗದೀಶ ಕನವಳ್ಳಿ, ಕಿರಣ ಕೋಣನವರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts