More

    ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಏ.19ರಂದು; ಬೃಹತ್ ಮೆರವಣಿಗೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗಿ

    ಹಾವೇರಿ: ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏ.19ರಂದು ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತಿಳಿಸಿದರು.
    ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.19ರಂದು ಮಧ್ಯಾಹ್ನ 12 ಗಂಟೆಗೆ ನಗರದ ಪುರ ಸಿದ್ದೇಶ್ವರ ದೇವಸ್ಥಾನದಿಂದ ಬೃಹತ್ ಮೆರವಣಿಗೆ ಆರಂಭವಾಗಲಿದೆ. ಎಂಜಿ ರಸ್ತೆ, ಹೊಸಮನಿ ಸಿದ್ದಪ್ಪ ವೃತ್ತ ಮಾರ್ಗವಾಗಿ ಪಿಬಿ ರಸ್ತೆಯ ಕೆಇಬಿ ಗ್ರಿಡ್ ಎದುರು ಮೈದಾನದಲ್ಲಿ ಅಂತ್ಯವಾಗಲಿದೆ. ಅಲ್ಲಿ ಬಿಎಸ್‌ವೈ, ಇತರರು ಭಾಷಣ ಮಾಡಲಿದ್ದಾರೆ ಎಂದರು.
    ಮೆರವಣಿಗೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಉಪನಾಯಕ ಅರವಿಂದ ಬೆಲ್ಲದ, ಮಾಜಿ ಸಚಿವರಾದ ಬಿ.ಸಿ.ಪಾಟೀಲ, ಸಿ.ಸಿ.ಪಾಟೀಲ, ಬಿ.ಶ್ರೀರಾಮುಲು, ಮುರುಗೇಶ ನಿರಾಣಿ, ಭೈರತಿ ಬಸವರಾಜ, ಕಳಕಪ್ಪ ಬಂಡಿ, ಸುನೀಲಕುಮಾರ, ನಟಿ ತಾರಾ ಅನುರಾಧಾ, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು, ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
    ಹಾವೇರಿ- ಗದಗ ಜಿಲ್ಲೆಯ ಎಂಟು ವಿಧಾನಸಭೆ ಕ್ಷೇತ್ರಗಳಿಂದ 60 ಸಾವಿರಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ. ಒಂದು ವಿಧಾನಸಭೆ ಕ್ಷೇತ್ರದಿಂದ ತಲಾ ಹತ್ತು ಸಾವಿರ ಜನ ಭಾಗವಹಿಸಲಿದ್ದಾರೆ. ಈ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಲಿದೆ ಎಂದರು.
    ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣವರ ಕಚೇರಿಗೆ ನಿನ್ನೆ ನಾನು ತೆರಳಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದೇನೆ. ಅವರು ಖಂಡಿತವಾಗಿ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ ಎಂದರು.
    ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಶಿವರಾಜ ಸಜ್ಜನರ, ವಿರುಪಾಕ್ಷಪ್ಪ ಬಳ್ಳಾರಿ, ರೈತ ಮೋರ್ಚಾ ಉಪಾಧ್ಯಕ್ಷೆ ಭಾರತಿ ಅಳವಂಡಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಶೋಭಾ ನಿಸ್ಸೀಮಗೌಡ್ರ, ಸುರೇಶ ಹೊಸಮನಿ, ನಾಗೇಂದ್ರ ಕಟಕೋಳ, ನಿರಂಜನ ಹೆರೂರ, ಸಂತೋಷ ಆಲದಕಟ್ಟಿ, ಅಲ್ಲಾಭಕ್ಷ ತಿಮ್ಮಾಪುರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts