More

    ಮೋದಿ ಸಾವು ಬಯಸುವಷ್ಟು ನೀಚ ಮಟ್ಟಕ್ಕಿಳಿದ ಕಾಂಗ್ರೆಸ್; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

    ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾವು ಬಯಸುವಷ್ಟು ನೀಚ ಮಟ್ಟಕ್ಕೆ ಕಾಂಗ್ರೆಸ್‌ನವರು ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹರಿಹಾಯ್ದರು.
    ತಾಲೂಕಿನ ಕೋಣನತಂಬಿಗಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗಲ್ಲ ಎಂಬ ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜು ಕಾಗೆ ಇಂತಹ ಹೇಳಿಕೆಯನ್ನು ಇತ್ತೀಚೆಗೆ ಕೊಡುತ್ತಿದ್ದಾರೆ. ಪ್ರಧಾನ ಮಂತ್ರಿಗಳ ಸಾವನ್ನು ಬಯಸುವ ನೀಚ ಮಟ್ಟಕ್ಕೆ ಕಾಂಗ್ರೆಸ್ ಶಾಸಕರು ಇಳಿದಿದ್ದಾರೆ. ಅಂದರೆ ಯಾವ ಮಟ್ಟಕ್ಕೆ ಹೋಗುತ್ತಿದ್ದಾರೆ ಎಂದು ಪ್ರಶ್ನಿಸಿದರು.
    ಯಾರೇ ಪ್ರತಿಸ್ಪರ್ದಿ ಇದ್ದರೂ ಸಾವನ್ನು ಬಯಸಬಾರದು. ಕೀಳು ಮಟ್ಟದ ಟೀಕೆ ಮಾಡಿದ್ದಷ್ಟು ಮೋದಿ ದೊಡ್ಡವರಾಗುತ್ತಲೇ ಬಂದಿದ್ದಾರೆ. ಮತ್ತೆ ಮತ್ತೆ ಗೆದ್ದು ಬಂದಿದ್ದಾರೆ. ಮೋದಿಯವರ ಆಯಸ್ಸು ಹೆಚ್ಚಾಗುತ್ತದೆ. ಆರೋಗ್ಯ ಚೆನ್ನಾಗಿ ಆಗುತ್ತದೆ. ಮೋದಿ ಅಲೆ ಸುನಾಮಿಯಾಗಿ ಪರಿವರ್ತನೆ ಆಗಿದೆ. ಮೋದಿ ಅಲೆಯಲ್ಲಿ ಇವರು ಕೊಚ್ಚಿ ಹೋಗುತ್ತಾರೆ ಎಂದರು
    ಬಿಜೆಪಿ ಸಂವಿಧಾನ ಬದಲಾವಣೆ ಮಾಡಲು ಹೊರಟಿದೆ ಎಂಬ ಮಾಜಿ ಶಾಸಕ ಓಲೆಕಾರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ನೆಹರು ಓಲೇಕಾರ ನಮ್ಮ ಪಕ್ಷದಲ್ಲಿ ಇದ್ದರು. ಆಗೇನು ಸಂವಿಧಾನ ಬದಲಾಗಿತ್ತಾ ? ಸಂವಿಧಾನ ಬದಲಾವಣೆ ಆಗುವ ಪ್ರಶೆಯೇ ಇಲ್ಲ ಎಂದರು.
    ನನ್ನ ಸಾಧನೆ ಜನರ ಮುಂದಿದೆ
    ನಾವು ಮೀಸಲಾತಿ ಹೆಚ್ಚು ಮಾಡಿದ್ದೇವೆ. ನಾನು ಹಾವೇರಿ ಅಭಿವೃದ್ಧಿ ಮಾಡಿದ್ದೇನೆ. ಸಿದ್ದರಾಮಯ್ಯಗೂ ಮಾಡಲಿಕ್ಕೆ ಆಗಿಲ್ಲ. ಹಾವೇರಿ ಜಿಲ್ಲೆಗೆ ಮೆಗಾ ಡೈರಿ, ಮೆಡಿಕಲ್ ಕಾಲೇಜು ತಂದಿದ್ದೇನೆ. ಮೆಗಾ ಮಾರ್ಕೇಟ್ ತಂದವರು, ಲಾ ಕಾಲೇಜು, ತೋಟಗಾರಿಕೆ ಕಾಲೇಜು ತಂದವರು ಯಾರು? ಎಲ್ಲ ಜನರ ಮುಂದೆ ಇದೆ. ಯಾರನ್ನು ಆಯ್ಕೆ ಮಾಸಬೇಕೆಂದು ಜನ ತೀರ್ಮಾನಿಸುತ್ತಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts