More

    ಕೋವಿಡ್ ಮಹಾಮಾರಿ ಹಿಮ್ಮೆಟ್ಟಿದ್ದು ಮೋದಿ ಸರ್ಕಾರ; ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ.ಬಸವರಾಜ ಕೇಲಗಾರ

    ಹಾವೇರಿ: ಕೋವಿಡ್ ಮಹಾಮಾರಿಯಿಂದ ಇಡೀ ವಿಶ್ವವೇ ನಲುಗಿ ಹೋಗಿದ್ದ ಸಂದರ್ಭದಲ್ಲಿ ಭಾರತದಲ್ಲಿ ಕೋವಿಡ್ ಹಿಮ್ಮೆಟ್ಟಿಸಿದ ಕೀರ್ತಿ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ.ಬಸವರಾಜ ಕೇಲಗಾರ ಹೇಳಿದರು.
    ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
    ಮೋದಿ ನೇತೃತ್ವದ ಸರ್ಕಾರ ಕೋವಿಡ್‌ಗೆ ದೇಸಿ ಲಸಿಕೆ ಕಂಡುಹಿಸಿದದ್ದಲ್ಲೇ ಎಲ್ಲರಿಗೂ ತಲುಪುವಂತೆ ಮಾಡಿದರು. ಈ ಮೂಲಕ ದೇಶಕ್ಕೆ ಸವಾಲಾಗಿದ್ದ ಕೋವಿಡ್ ಅನ್ನು ಹಿಮ್ಮೆಟ್ಟಿಸಿದರು ಎಂದರು.
    ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ಚುನಾವಣಾ ನಿರ್ವಹಣಾ ಸಮಿತಿಗಳಿಗೆ ವಿಭಾಗಶಹಃ ಚುನಾವಣಾ ನಿರ್ವಹಣೆ ಮತ್ತು ತಂತ್ರಗಾರಿಕೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರ ಉದ್ದೇಶದಂತೆ ಕೃಷಿಕರು, ಬಡವರು, ಮಹಿಳೆಯರು ಮತ್ತು ಯುವಕರ ಪರವಾಗಿ ಭಾರತೀಯ ಜನತಾ ಪಕ್ಷ ಕಾರ್ಯಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.
    ವಿಧಾನ ಪರಿಷತ್ ಸದಸ್ಯ ಹಾಗೂ ಕ್ಲಸ್ಟರ್ ಸಂಯೋಜಕ ಕೆ.ಎಸ್.ನವೀನ, ಗದಗ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಹಾವೇರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂಜುಂಡೇಶ ಕಳ್ಳೇರ, ಮಂಜುನಾಥ ಗಾಣಗೇರ, ಡಾ.ಸಂತೋಷ ಆಲದಕಟ್ಟಿ, ಪಕ್ಕಿರೇಶ ರಟ್ಟಿಹಳ್ಳಿ, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts