More

    ಬಿಜೆಪಿ ಸರ್ಕಾರ ದೇಶಕ್ಕಾಗಿ ಕೆಲಸ ಮಾಡಿದೆ; ತಿರಂಗಾ ಯಾತ್ರೆಯಲ್ಲಿ ಡಾ.ಸಂತೋಷ ಆಲದಕಟ್ಟಿ

    ಹಾವೇರಿ: ಭಾರತೀಯ ಜನತಾ ಪಾರ್ಟಿ ಜಾತಿ, ಧರ್ಮ ಮೀರಿ ದೇಶ ಮೊದಲು ಎಂದು ಅಧಿಕಾರ ಮಾಡಿದೆ. ಬಿಜೆಪಿ ಆಡಿಳಿತಾವಧಿಯಲ್ಲಿ ದೇಶದ ಸಮಗ್ರ ಅಭಿವೃದ್ಧಿ ಹಾಗೂ ದೇಶದ ಸುರಕ್ಷತೆಗೆ ಆದ್ಯತೆ ನೀಡಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಸಂತೋಷ ಆಲದಕಟ್ಟಿ ಹೇಳಿದರು.
    ಜಿಲ್ಲಾ ಯುವ ಮೋರ್ಚಾ ವತಿಯಿಂದ ನಗರದ ಮಹತ್ಮಾ ಗಾಂಧಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ರಾಷ್ಟ್ರ ಮೊದಲು ಸಂಕಲ್ಪಕ್ಕಾಗಿ ತಿರಂಗಾ ಯಾತ್ರೆ ನಡೆಸಲಾಯಿತು. ನಂತರ ಮಾತನಾಡಿದ ಅವರು, ನಮಗೆ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಿಂತ ಸಮಗ್ರ ಸಮಾಜದ ಅಭಿವೃದ್ಧಿ ಮುಖ್ಯ. ದೇಶದ ವಿಷಯ ಬಂದಾಗ ನಾವು ಎಲ್ಲ ಕಟ್ಟಳೆಗಳ ಮೀರಿ ದೇಶಕ್ಕೆ ಪ್ರಥಮ ಆದ್ಯತೆ ನೀಡುತ್ತೇವೆ. ಹಾಗಾಗಿ, ಸುಭದ್ರ ಭಾರತಕ್ಕಾಗಿ, ಸುರಕ್ಷಿತ ಕರ್ನಾಟಕಕ್ಕಾಗಿ ಬಿಜೆಪಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
    ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಭಿಷೇಕ ಗುಡಗೂರ, ಜಿಲ್ಲಾ ಘಟಕದ ಉಪಾಧ್ಯಕ್ಷ ಬಸವರಾಜ ಕಳಸೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡೇಶ ಕಳ್ಳೇರ, ಜಿಲ್ಲಾ ಕಾರ್ಯದರ್ಶಿ ವೀರಣ್ಣ ಅಂಗಡಿ, ನಗರ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ, ಗ್ರಾಮೀಣ ಮಂಡಲ ಅಧ್ಯಕ್ಷ ವೆಂಕಟೇಶ ನಾರಾಯಣಿ, ವರುಣ ಆನವಟ್ಟಿ, ವರುಣ ಮಲ್ಲಿಗಾರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts