More

    ಚನ್ನೇಶ ಪತ್ತಿನ ಸೌಹಾರ್ದ ಸಹಕಾರಿ ಸಂಘದ ನೂತನ ಹಾವೇರಿ ಶಾಖೆ ಉದ್ಘಾಟನೆ

    ಹಾವೇರಿ: ನಗರದ ಮಾಗಾವಿ ಚೇಂಬರ್ಸ್‌ನಲ್ಲಿ ಮಂಗಳವಾರ ರಾಣೆಬೆನ್ನೂರಿನ ಚನ್ನೇಶ ಪತ್ತಿನ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆಯನ್ನು ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಉದ್ಘಾಟಿಸಿದರು.
    ಶಿರಹಟ್ಟಿಯ ಶ್ರೀ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಚನ್ನೇಶ ಸೌಹಾರ್ದ ಸಹಕಾರಿ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ರಚಿಸಿದ ‘ಚೆನ್ನ ಚೇತನ’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.
    ಸಂಘದ ಅಧ್ಯಕ್ಷ ಕೆ.ಶಿವಲಿಂಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ, ಮಾಜಿ ಶಾಸಕರಾದ ಶಿವರಾಜ ಸಜ್ಜನರ, ಅರುಣಕುಮಾರ ಪೂಜಾರ, ವಿರುಪಾಕ್ಷಪ್ಪ ಬಳ್ಳಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಜಿ.ನಂಜನಗೌಡ, ಸಂಘದ ಎಂಡಿ ಶರಣಗೌಡ ಪಾಟೀಲ, ಗವಿಸಿದ್ದಪ್ಪ ದ್ಯಾವಣ್ಣನವರ, ಪುಂಡಲಿಕಪ್ಪ ಶಿರೂರ, ವಿಕ್ರಮ ಕುಲಕರ್ಣಿ, ಮತ್ತಿತರರು ಪಾಲ್ಗೊಂಡಿದ್ದರು. ಬಸವರಾಜ ಪಾಟೀಲ ಸ್ವಾಗತಿಸಿದರು, ಚನ್ನೇಶ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕ ಕೆ.ಎನ್.ಪಾಟೀಲ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts