ಹಾವೇರಿ: ನಗರದ ಅಂಜುಮನ್ ಎ ಇಸ್ಲಾಂ ಸಮಿತಿ ವತಿಯಿಂದ ಈದ್ಗಾ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ರಂಜಾನ್ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪಾಲ್ಗೊಂಡಿದ್ದರು. ಮುಸ್ಲಿಂ ಸಹೋದರರಿಗೆ ಶುಭ ಕೋರಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ದಾದಾಪೀರ್ ಚೂಡಿಗಾರ, ಸುನೀಲ ಜಮಾದಾರ, ಸುಬಾನಿ ಚೂಡಿಗಾರ, ನಾಶೀರ್ಖಾನ್ ಪಠಾಣ, ಉಮರ್ ಇನಾಮದಾರ್, ಇತರರು ಇದ್ದರು.