More

    ಜಿಲ್ಲೆಯಲ್ಲಿ ಬಸವ ಜಯಂತ್ಯುತ್ಸವ ಸಡಗರ; ಹಾವೇರಿಯಲ್ಲಿ ಬಸವೇಶ್ವರ ಪುತ್ಥಳಿಗೆ ಡಿಸಿ ಮಾಲಾರ್ಪಣೆ

    ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವದ ಸಡಗರ ಮನೆ ಮಾಡಿತ್ತು. ಜಿಲ್ಲೆಯಾದ್ಯಂತ ಜಾತಿ, ಭೇದ, ಭಾವ ಮರೆತು ಎಲ್ಲರೂ ಒಂದಾಗಿ ನಗರ, ಪಟ್ಟಣ, ಹಳ್ಳಿಗಳಲ್ಲಿ ಬಸವೇಶ್ವರ ಜಯಂತಿ ಆಚರಿಸಿದರು.
    ವಿವಿಧ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜು, ಸಂಘ-ಸಂಸ್ಥೆಗಳಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಬಸವೇಶ್ವರರ ವಚನಗಳನ್ನು ಓದುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
    ಜಿಲ್ಲಾಡಳಿತದಿಂದ ಆಚರಣೆ
    ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಹಾವೇರಿ ನಗರದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ರಘುನಂದನ ಮೂರ್ತಿ ನಗರದ ಹೊಸಮಠದ ವೃತ್ತದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts