ಹಾವೇರಿ: ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರ ಜನ್ಮದಿನದ ನಿಮಿತ್ತ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹರಿಹರ ತಾಲೂಕಿನ ಬೆಳ್ಳೂಡಿಯ ಶ್ರೀಮಠಕ್ಕೆ ಗುರುವಾರ ಭೇಟಿ ನೀಡಿ ಶ್ರೀಗಳಿಗೆ ಶುಭಾಶಯ ಕೋರಿದರು. ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಇತರರಿದ್ದರು.