ಹಾವೇರಿ: ಕಾಶಿಯ ಜಂಗಮವಾಡಿ ಮಠದ ಶ್ರೀ ಚಂದ್ರಶೇಖರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಏ.15ರಂದು ಹಾವೇರಿ ನಗರಕ್ಕೆ ಭೇಟಿ ನೀಡಲಿದ್ದಾರೆ.
ಇಲ್ಲಿನ ಅಶ್ವಿನಿ ನಗರದ ವಿಜಯಕುಮಾರ ಗೊಡಚಿ ಅವರ ನಿವಾಸದಲ್ಲಿ ಬೆಳಗ್ಗೆ 8 ಗಂಟೆಯಿಂದ 10.30ರವರೆಗೆ ನಡೆಯಲಿರುವ ಇಷ್ಟಲಿಂಗ ಮಹಾಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ದರ್ಶನಾಶೀರ್ವಾದ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.