ಹಾವೇರಿ: ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶದ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ವಾರ್ಷಿಕ ಸಮಾರಂಭದಲ್ಲಿ ಹಾವೇರಿಯ ಕೆಎಲ್ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಸ್ವಯಂಸೇವಕಿ ಐಶ್ವರ್ಯ ಮಾನೇಗಾರಗೆ 2021-2022ನೇ ಸಾಲಿನ ಡಾ.ಡಿ.ಸಿ.ಪಾವಟೆ ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಸಂಧ್ಯಾ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ಕವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಎನ್.ಎಸ್.ಎಸ್. ಪ್ರಾಂತೀಯ ಯುವಾಧಿಕಾರಿ ವೈ.ಎಂ.ಉಪ್ಪಿನ, ಕುಲಸಚಿವರಾದ ಪ್ರೊ.ಚಂದ್ರಮ್ಮ ಎಂ., ಪ್ರೊ.ಸಿ.ಕೃಷ್ಣಮೂರ್ತಿ, ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ.ಎಂ.ಬಿ.ದಳಪತಿ ಇದ್ದರು.