More

    ಮಹಿಳೆಯರಿಗೆ ಸ್ವಾವಲಂಭಿ ಬದುಕಿಗೆ ಕಾಂಗ್ರೆಸ್ ಗ್ಯಾರಂಟಿ; ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

    ಹಾವೇರಿ: ಕಾಂಗ್ರೆಸ್ ಪಕ್ಷ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ಮಹಿಳೆಯರ ಗೌರವ ಹೆಚ್ಚಾಗಿದೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
    ನಗರದ ಸಿದ್ದಲಿಂಗೇಶ್ವರ ಗಾರ್ಮೆಂಟ್ಸ್‌ಗೆ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಸೋಮವಾರ ಭೇಟಿ ನೀಡಿ ಮತಯಾಚಿಸಿದರು. ನಾನು ಪಕ್ಷದ ನಿಷ್ಠಾವಂತೆ ಕಾರ್ಯಕರ್ತನಾಗಿದ್ದು, ನಿಮ್ಮ ಸಹೋದರನಾಗಿ ನಿಮ್ಮ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ. ಈ ಹಿನ್ನೆಲೆಯಲ್ಲಿ ಮೇ 7ರಂದು ಜರುಗುವ ಲೋಕಸಭಾ ಚುನಾವಣೆಯಲ್ಲಿ ಹಸ್ತದ ಗುರುತಿಗೆ ಮತ ನೀಡಿ ಗೆಲುವಿಗೆ ಕಾರಣರಾಗಬೇಕೆಂದು ಮನವಿ ಮಾಡಿದರು.
    ಇದಕ್ಕೂ ಮುನ್ನ ನಗರದ ಪಿ.ಬಿ. ರಸ್ತೆಯ ಮೈ ಡ್ರಿಮ್ ಜಿಮ್‌ನಲ್ಲಿ ಸನ್ಮಾನ ಸ್ವೀಕರಿಸಿದರು. ಬಳಿಕ ಹಳೆಯ ಎಪಿಎಂಸಿ ಮಾರುಕಟ್ಟೆಯಲ್ಲಿ ಹಮಾಲರ ಅಹವಾಲು ಆಲಿಸಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ತಮ್ಮ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು. ನಗರದ ಅಗ್ರಹಾರ ಓಣಿಯ ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ರಥೋತ್ಸವ ಹಿನ್ನೆಲೆಯಲ್ಲಿ ದೇವರ ದರ್ಶನ ಪಡೆದರು.
    ಶಾಸಕ ರುದ್ರಪ್ಪ ಲಮಾಣಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಸಿ.ಎಸ್.ಲಕ್ಷ್ಮೇಶ್ವರಮಠ, ರಮೇಶ ಆನವಟ್ಟಿ, ಅತ್ತಾವುಲ್ಲಾ ಖಾಜಿ, ಪರಸಣ್ಣ ಅಡಕಿ, ಉಳಿವೆಪ್ಪ ಹಲಗಣ್ಣವರ, ಜಾಫರ್ ಅತ್ತಾರ, ಉಮರ್ ಇನಾಮದಾರ, ಇತರರಿದ್ದರು.
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಸವರಾಜ ಹೆಡಿಗೊಂಡ, ರಮೇಶ ಆನವಟ್ಟಿ, ಶಿವನಗೌಡ ಪಾಟೀಲ, ಸುರೇಶಗೌಡ ಪಾಟೀಲ, ವೀರೇಶ ಮತ್ತಿಹಳ್ಳಿ, ಹನುಮಂತಗೌಡ ಕಟ್ಟೆಗೌಡ್ರ, ಹೊಳಿಯಪ್ಪ ಸೂರದ, ರುದ್ರಪ್ಪ ಕಾಳಪ್ಪನವರ, ಜಗದೀಶ ಮನ್ನಂಗಿ, ಅಸ್ಲಾಂ ಶೇತಸನದಿ, ಇತರರು ಉಪಸ್ಥಿತರಿದ್ದರು.

    ದೇವಗಿರಿಯಲ್ಲಿ ಪ್ರಚಾರ ಸಭೆ
    ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವುದು ಅಷ್ಟೇ ಅಲ್ಲದೇ ಸರ್ವರನ್ನು ಸಮಭಾವದಿಂದ ಕಾಣುವ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಿದರೆ ಮಾತ್ರ ನಾಡಿಗೆ ಉಜ್ವಲ ಭವಿಷ್ಯವಿದೆ ಎಂದು ದೇವಗಿರಿಯಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts