ಹಾವೇರಿ: ಕಳೆದ ವಾರದಿಂದ ನದಿ ಮೂಲಗಳಲ್ಲಿ ಹೆಚ್ಚಾಗಿ ಮಳೆಯಾಗಿದ್ದು, ನದಿಯಲ್ಲಿ ರಾಡಿ ನೀರು ಬರುತ್ತಿದೆ. ಇದರಿಂದ ಕಾಯಿಲೆಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ನಲ್ಲಿಯ ನೀರನ್ನು ನೇರವಾಗಿ ಕುಡಿಯದೇ, ನೀರನ್ನು ಕುದಿಸಿ, ಆರಿಸಿ ಕುಡಿಯುವಂತೆ ಹಾವೇರಿ ನಗರಸಭೆ ಪೌರಾಯುಕ್ತ ಡಿ.ದೇವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.