More

    ನೂತನ ಎಸ್‌ಪಿ ಅನ್ಶುಕುಮಾರ ಅಧಿಕಾರ ಸ್ವೀಕಾರ

    ಹಾವೇರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ ಅವರು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಅನ್ಶುಕುಮಾರ ನೇಮಕಗೊಂಡಿದ್ದಾರೆ.
    ಶಿವಕುಮಾರ ಗುಣಾರೆ ಅವರು ಬೆಂಗಳೂರು ನಗರದ ವೈಟ್‌ಫೀಲ್ಡ್ ವಿಭಾಗದ ಡಿಸಿಪಿಯಾಗಿ ವರ್ಗಾವಣೆಯಾಗಿದ್ದಾರೆ. ಉಡುಪಿಯ ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅನ್ಶುಕುಮಾರ ಅವರನ್ನು ಹಾವೇರಿ ಜಿಲ್ಲೆಯ ನೂತನ ಎಸ್‌ಪಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಗುರುವಾರ ಗುಣಾರೆ ಅವರು ಅನ್ಶುಕುಮಾರ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
    ದೆಹಲಿ ಐಐಟಿ ವಿದ್ಯಾರ್ಥಿ
    ಐಪಿಎಸ್ 2018ರ ಬ್ಯಾಚ್‌ನ ಅಧಿಕಾರಿಯಾಗಿರುವ ಅನ್ಶುಕುಮಾರ ಅವರು ಮೂಲತಃ ಉತ್ತರ ಪ್ರದೇಶದ ಗೋರಕಪುರ ನಿವಾಸಿ. ದೆಹಲಿಯ ಐಐಟಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದು ನಂತರ ಐಪಿಎಸ್ ಪಾಸಾದರು. ಆರಂಭದಲ್ಲಿ ಕಲಬುರಗಿ ದಕ್ಷಿಣ ವಲಯದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ, ನಂತರ ಮಂಗಳೂರು ಮಹಾನಗರದ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ, ಬಳಿಕ ಉಡುಪಿಯ ಕರಾವಳಿ ಪಡೆಯ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts