More

    ಬೆಂಗಳೂರಿನಲ್ಲಿ ರಾಷ್ಟ್ರೀಯ ಕಿಸಾನ್ ಮಹಾಪಂಚಾಯತ್ ಅಧಿವೇಶನ ಡಿ. 23ರಂದು

    ಹಾವೇರಿ: ಸಂಕಷ್ಟದಲ್ಲಿರುವ ರಾಜ್ಯದ ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಲು ಬೆಂಗಳೂರಿನಲ್ಲಿ ಡಿ. 23ರಂದು ರಾಷ್ಟ್ರೀಯ ಕಿಸಾನ್ ಮಹಾಪಂಚಾಯತ್ ಅಧಿವೇಶನ ಹಮ್ಮಿಕೊಳ್ಳಲಾಗಿದೆ. ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ನೆರವಿಗೆ ಬಾರದೆ ರಾಜಕೀಯ ಚೆಲ್ಲಾಟವಾಡುತ್ತಿದ್ದಾರೆ. ಈ ವಿಶೇಷ ಅಧಿವೇಶನ ಹಗಲು ವೇಶದ ನಾಟಕವಾಗದೆ ರೈತರ ಸಂಪೂರ್ಣ ಸಾಲಮನ್ನಾ ಪ್ರಕಟಿಸುವ ವೇದಿಕೆ ಆಗಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ್ ಶಾಂತಕುಮಾರ ಆಗ್ರಹಿಸಿದರು.
    ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ ಅವರು, ರಾಜ್ಯದ 223 ತಾಲೂಕುಗಳು ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿವೆ. ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಬೆಳೆ ಹಾನಿ, ಮಳೆಹಾನಿ, ಪ್ರವಾಹ ಹಾನಿಯಿಂದ ರೈತರು ತತ್ತರಿಸಿದ್ದಾರೆ. ಕೃಷಿ ಸಾಲ ಪಡೆದ ರೈತ ಸಾಲದ ಹಣವನ್ನು ವ್ಯವಸಾಯಕ್ಕೆ ಹೂಡಿಕೆ ಮಾಡಿ ಬೆಳೆ ನಾಶವಾಗಿದೆ. ಹಾಕಿದ ಹಣ ವಾಪಸ್ ಬಂದಿಲ್ಲ, ಆದ್ದರಿಂದ ರೈತನ ಸಂಪೂರ್ಣ ಸಾಲ ಮನ್ನವಾಗಬೇಕು ಎಂದು ಒತ್ತಾಯಿಸಿದರು.
    ಕೈಗಾರಿಕೆ, ಉದ್ಯಮಿಗಳಿಗೆ, ಸಾಲ ಮನ್ನಾ, ತೆರಿಗೆ ಮನ್ನಾ ಮಾಡಿರುವ ರೀತಿ, ರೈತರ ಎಲ್ಲಾ ಬ್ಯಾಂಕು ಹಾಗೂ ಸಹಕಾರ ಸಂಘಗಳ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಲೇಬೇಕು ಎಂದು ಒತ್ತಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ವತಿಯಿಂದ ರೈತ ಅಧಿವೇಶನ ನಡೆಸಲಾಗುತ್ತಿದೆ. ದೆಹಲಿಯಲ್ಲಿ ಒಂದು ವರ್ಷ ಹೋರಾಟ ಮಾಡಿದ ರಾಷ್ಟ್ರೀಯ ರೈತ ಮುಖಂಡರುಗಳು ಈ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದು , ಬೆಂಗಳೂರಿನ ಸಮಾವೇಶಕ್ಕೆ ರಾಜ್ಯದ ರೈತರು ಸ್ವಯಂ ಪ್ರೇರಿತರಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
    ಬರಗಾಲದಿಂದ ಕಬ್ಬು ಇಳುವರಿ ಶೇ. 50ರಷ್ಟು ಕಡಿಮೆಯಾಗಿದೆ. ಸಕ್ಕರೆ ಹಾಗೂ ಯಥನಾಲ್ ಬೇಡಿಕೆ ಹೆಚ್ಚು ಇರುವ ಕಾರಣ ಸಕ್ಕರೆ ಕಾರ್ಖಾನೆಗಳು ಪೈಪೋಟಿಯಲ್ಲಿ ಕಬ್ಬು ಖರಿಸುತ್ತಿದ್ದಾರೆ. ರೈತರು ಜಾಗೃತರಾಗಿ ಹೆಚ್ಚು ದರ, ಮುಂಗಡ ಹಣ ಪಾವತಿಸುವ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಬೇಕು. ಬರ ಪರಿಹಾರ ನಷ್ಟ ಸಮಿಕ್ಷೆಯಲ್ಲಿ ಕಬ್ಬಿನ ಬೆಳೆ ನಷ್ಟ ಅಂದಾಜು ಮಾಡುತ್ತಿಲ್ಲ, ಎನ್‌ಡಿಆರ್‌ಎಫ್ ಮಾನ ದಂಡದಲ್ಲಿ ಕಬ್ಬಿನ ಬೆಳೆಯನ್ನು ಸೇರಿಸಿ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
    ಸಕ್ಕರೆ ಕಾರ್ಖಾನೆಗಳು ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಕಡಿಮೆ ತೋರಿಸಿ ತೂಕದಲ್ಲಿ ಮೋಸ, ಕಬ್ಬಿನ ದರದಲ್ಲಿಯೂ ವಂಚನೆ ಮಾಡುತ್ತಿದ್ದಾರೆ ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಬೇಕು. ಬೆಳಗಾವಿ ಬಾಗಲಕೋಟೆ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳು ಕಬ್ಬಿನ ದರ ದರ ಎಫ್‌ಆರ್‌ಪಿ ಮೇಲೆ ಹೆಚ್ಚುವರಿಯಾಗಿ 300 ರಿಂದ 400ರೂ., ನೀಡುತ್ತಿದ್ದಾರೆ. ಆದರೆ ಇಲ್ಲಿನ ಸಂಗೂರ್ ಸಕ್ಕರೆ ಕಾರ್ಖಾನೆ ಎಫ್‌ಆರ್‌ಪಿ ದರದಲ್ಲಿಯೇ ಕಡಿತ ಮಾಡಿ ರೈತರನ್ನು ವಂಚಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ನ್ಯಾಯಯುತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ಸಂಘಟನೆ ಜಿಲ್ಲಾ ಅಧ್ಯಕ್ಷ ಭುವನೇಶ್ವರ ಶಿಡ್ಲಾಪುರ, ಪ್ರಮುಖರಾದ ಮಹೇಶ ಪಯಡಿಯಾಲ, ಹತ್ತಳ್ಳಿ ದೇವರಾಜ್, ರಾಜಶೇಖರ ಬೆಟಗೇರಿ, ಬಸವಣ್ಣಪ್ಪ ಬೆಂಚಳ್ಳಿ, ಮುತ್ತು ಗುಡಿಗೇರಿ, ಚೆನ್ನಪ್ಪ ಮುರಡೂರ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts