ಹಾವೇರಿಯಲ್ಲಿ ನಂದಿ ರಥಯಾತ್ರೆಗೆ ಭವ್ಯ ಸ್ವಾಗತ

blank

ಹಾವೇರಿ: ರಾಮಮಂದಿರ ನಿರ್ಮಾಣವಾಗಿ ಒಂದು ವರ್ಷ ಪೂರೈಸಿದ ನೆನಪಿನಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ನಂದಿ ರಥಯಾತ್ರೆಗೆ ನಗರದಲ್ಲಿ ಇತ್ತೀಚೆಗೆ ಭವ್ಯ ಸ್ವಾಗತ ಕೋರಲಾಯಿತು.
ಧಾರವಾಡ ಜಿಲ್ಲೆಯಿಂದ ಆಗಮಿಸಿದ ರಥಯಾತ್ರೆಯನ್ನು ಹಾವೇರಿ ಜಿಲ್ಲೆಯ ಗಡಿಭಾಗ ತಡಸ ಕ್ರಾಸ್ ಬಳಿ ಸ್ವಾಗತಿಸಲಾಯಿತು. ನಂತರ, ರಥಯಾತ್ರೆಯು ಶಿಗ್ಗಾಂವಿ ಮಾರ್ಗವಾಗಿ ಹಾವೇರಿ ಪ್ರವೇಶಿಸಿತು.
ಹಾವೇರಿ ನಗರದಲ್ಲಿ ರಥಯಾತ್ರೆಯನ್ನು ಸ್ವಾಗತಿಸಿದ ಜನರು, ರಥದಲ್ಲಿದ್ದ ಗೋವುಗಳನ್ನು ಪೂಜೆ ಸಲ್ಲಿಸಿದರು. ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಹಾಗೂ ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ರಥವನ್ನು ಸ್ವಾಗತಿಸಿ, ಗೋವುಗಳಿಗೆ ಹಣ್ಣು ತಿನ್ನಿಸಿದರು.
ಬಂಟ್ವಾಳ ತಾಲೂಕಿನ ಬ್ರಹ್ಮಗಿರಿಯ ಗೋಸೇವಾ ಗತಿವಿಧಿ ಕರ್ನಾಟಕ ಹಾಗೂ ರಾಧಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ವತಿಯಿಂದ ನಂದಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. 88 ದಿನಗಳವರೆಗೆ ರಾಜ್ಯದೆಲ್ಲೆಡೆ ರಥಯಾತ್ರೆ ಸಂಚರಿಸಲಿದ್ದು, ಪ್ರತಿ ಮನೆಗಳಲ್ಲಿಯೂ ಗೋಮಯ ಹಣತೆ ಬೆಳಗಿಸಲಾಗುವುದು. 2024ರ ಡಿ.31ರಿಂದ 2025ರ ಮಾರ್ಚ್ 29ರವರೆಗೆ ರಥಯಾತ್ರೆ ನಡೆಯಲಿದ್ದು, ಮಂಗಳೂರಿನಲ್ಲಿ ಅಂತಿಮಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಆರ್‌ಎಸ್‌ಎಸ್‌ನ ಅಶೋಕ ನಾಡಿಗೇರ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಪ್ರಭು ಹಿಟ್ನಳ್ಳಿ, ರುದ್ರೇಶ ಚಿನ್ನಣ್ಣನವರ, ಸಂತೋಷ ಆಲದಕಟ್ಟಿ, ಕಿರಣ ಕೋಣನವರ, ಗಂಗಾಧರ ಕುಲಕರ್ಣಿ, ಇತರರಿದ್ದರು.

 

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…