More

    ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸಂಜನಾ ಆರೋಗ್ಯ ತಪಾಸಣೆ

    ಬೆಂಗಳೂರು: ಡ್ರಗ್ಸ್ ಜಾಲದೊಂದಿಗೆ ನಂಟು ಹೊಂದಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ವಾಣಿ ವಿಲಾಸ ಆಸ್ಪತ್ರೆ ವೈದ್ಯರ ವರದಿ ಆಧರಿಸಿ ತೀರ್ಮಾನಿಸುವುದಾಗಿ ಹೈಕೋರ್ಟ್ ತಿಳಿಸಿದೆ.

    ಅಸ್ತಮಾ ಹಾಗೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡುವಂತೆ ಕೋರಿ ಸಂಜನಾ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು.

    ಈಗಾಗಲೇ ಅರ್ಜಿ ಕುರಿತು ವಿಚಾರಣೆ ಪೂರ್ಣಗೊಳಿಸಿರುವ ಪೀಠ, ಸಂಜನಾ ಆರೋಗ್ಯದ ಬಗ್ಗೆ ನಗರದ ವಾಣಿವಿಲಾಸ ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿ, ವರದಿ ಸಲ್ಲಿಸಬೇಕು. ಆ ವರದಿ ಪರಿಶೀಲಿಸಿದ ಬಳಿಕ ಜಾಮೀನು ಕುರಿತು ತೀರ್ಮಾನಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿತು.

    ವಿಚಾರಣೆ ವೇಳೆ ವಾದ ಮಂಡಿಸಿದ್ದ ಸಂಜನಾ ಪರ ಹಿರಿಯ ವಕೀಲ ಹಷ್ಮತ್ ಪಾಷಾ, ಅನಾರೋಗ್ಯದಿಂದ ಬಳಲುತ್ತಿರುವ ಅರ್ಜಿದಾರರು 2018ರಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಶಸಚಿಕಿತ್ಸೆಗೆ ಒಳಗಾಗಿದ್ದರು. 2019ರಿಂದ ಅಸ್ತಮಾ ಹಾಗೂ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಚಳಿಗಾಲದಲ್ಲಿ ಸಮಸ್ಯೆ ಉಲ್ಬಣಿಸಲಿದ್ದು, ಹೆಚ್ಚಿನ ಚಿಕಿತ್ಸೆ ಪಡೆಯಬೇಕಿದೆ. ಆದ್ದರಿಂದ, ಅವರ ಅನಾರೋಗ್ಯದ ಅಂಶ ಪರಿಗಣಿಸಿ ಜಾಮೀನು ಮಂಜೂರು ಮಾಡಬೇಕೆಂದು ಕೋರಿದ್ದರು.

    ಇದಕ್ಕೆ ಆಕ್ಷೇಪಿಸಿದ್ದ ವಿಶೇಷ ಅಭಿಯೋಜಕ ವೀರಣ್ಣ ತಿಗಡಿ, ಅರ್ಜಿದಾರರ ಆರೋಗ್ಯ ಸಮಸ್ಯೆಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ವಾಣಿ ವಿಲಾಸ್ ಆಸ್ಪತ್ರೆ ವೈದ್ಯರು ಸಿದ್ಧರಿಸಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts