More

    ಕಾಂಗ್ರೆಸ್ ಚೊಂಬು ಜಾಹಿರಾತಿಗೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ತಿರುಗೇಟು! ಹೇಳಿದ್ದಿಷ್ಟು

    ಚಿಕ್ಕಬಳ್ಳಾಪುರ: ಇಂದು ಲೋಕಸಭಾ ಚುನಾವಣೆಯ ಹಿನ್ನೆಲೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠರಾದ ಎಚ್​.ಡಿ. ದೇವೇಗೌಡರು ಪಕ್ಷದ ಜತೆಗೆ ಇರುವುದರ ಬಗ್ಗೆ ಮಾತನಾಡಿ, ದೇವೇಗೌಡರು ಅತ್ಯಂತ ಅನುಭವಿ ರಾಜಕಾರಣಿ. ಅವರ ಮಾರ್ಗದರ್ಶನ ನಮ್ಮ ಜೊತೆಗಿದೆ. ಎನ್‍ಡಿಎ ಸರಕಾರ ರೈತರನ್ನು ಆರ್ಥಿಕವಾಗಿ ಬಲಪಡಿಸುತ್ತಿದೆ. ಶ್ರೀ ಅನ್ನ ಮೂಲಕ ಸಿರಿಧಾನ್ಯವನ್ನು ಜಾಗತಿಕ ಮಾರುಕಟ್ಟೆಗೆ ಪರಿಚಯಿಸಿದ್ದೇವೆ. ಇದು ಈ ಭಾಗದ ಜನರಿಗೆ ನೆರವಾಗಲಿದೆ ಎಂದು ಹೇಳಿದರು.

    ಇದನ್ನೂ ಓದಿ: ಉಚಿತ ಭಾಗ್ಯಗಳಿಂದ ಬರಲಿದೆ ಬಡಿದಾಡಿ ತಿನ್ನುವ ಪರಿಸ್ಥಿತಿ

    ಬಿಜೆಪಿ ಸರಕಾರವಿದ್ದಾಗ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 10 ಸಾವಿರ ಸಿಗುತ್ತಿತ್ತು. ಅದನ್ನು 6 ಸಾವಿರಕ್ಕೆ ಇಳಿಸಲಾಗಿದೆ. 4 ಸಾವಿರ ಕೊಡುತ್ತಿದ್ದುದನ್ನು ರದ್ದು ಮಾಡಿದ್ದಾರೆ. ಇಂಥ ರೈತ ವಿರೋಧಿಗಳಿಗೆ ಪಾಠ ಕಲಿಸಿ ಎಂದು ಮೋದಿ ಮನವಿ ಮಾಡಿದರು. ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯಡಿ ಮೂಲಸೌಕರ್ಯ ಹೆಚ್ಚಿಸುತ್ತಿದ್ದೇವೆ. ಹೆದ್ದಾರಿಗಳ ಸಂಖ್ಯೆ ವ್ಯಾಪ್ತಿ ಹೆಚ್ಚಿಸಿದ್ದೇವೆ. ಈ ಭಾಗದಲ್ಲಿ ವಿಶೇಷ ಆರ್ಥಿಕ ವಲಯ ನಿರ್ಮಿಸಲಾಗುತ್ತಿದೆ. ನಂದಿ ಬೆಟ್ಟ, ತಾಯಿ ಕೋಲಾರಮ್ಮನ ಆಶೀರ್ವಾದ ಇದೆ. ಇವುಗಳಿಗೆ ಪ್ರೋತ್ಸಾಹ ಕೊಡುತ್ತೇವೆ ಎಂದರು.

    ಇನ್ನು ಕಾಂಗ್ರೆಸ್​ ನಾಯಕರು ಚೊಂಬು ತೋರಿಸಿ ಜಾಹೀರಾತನ್ನು ಬಹಿರಂಗಪಡಿಸಿದರ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡ, ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ, ದೇಶವನ್ನು ವಿಶ್ವದಲ್ಲಿ ಪ್ರಥಮ ಸ್ಥಾನಕ್ಕೆ ತೆಗೆದುಕೊಂಡು ಹೋದ ಪ್ರಧಾನಿ ಮೋದಿಯವರನ್ನು ಬೆಂಬಲಿಸೋಣ. ಈ ರಾಜ್ಯದ ಮುಖ್ಯಮಂತ್ರಿಗಳು ಚೊಂಬು ಜಾಹೀರಾತು ಪ್ರಕಟಿಸಿದ್ದಾರೆ. ಡಾ. ಮನಮೋಹನ್ ಸಿಂಗ್ 10 ವರ್ಷಗಳ ಕಾಲ ಚೊಂಬು ಕೊಟ್ಟಿದ್ದಾರೆ ಎಂದರು.

    ಇದನ್ನೂ ಓದಿ: ನಿಯಂತ್ರಣ ಕೊಠಡಿ ವೀಕ್ಷಿಸಿದ ಸಾಮಾನ್ಯ ವೀಕ್ಷಕ

    ಸೋನಿಯಾ ಗಾಂಧಿಯವರು ಯುಪಿಎ ಅಧ್ಯಕ್ಷೆ ಆಗಿದ್ದಾಗ ಅದೆಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಪ್ರಶ್ನಿಸಿದರು. ರಾಷ್ಟ್ರದ ಸಂಪತ್ತನ್ನು ಸೂರೆ ಮಾಡಿ ಚೊಂಬು ಬರಿದಾಗಿದೆ. ಬರಿಯ ಚೆಂಬನ್ನು ಯಾರ ಕೈಗೆ ಕೊಟ್ಟರು ಈ ಕಾಂಗ್ರೆಸ್ ನಾಯಕರು ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ನಿಮ್ಮವರು ಸಂಪತ್ತು ಲೂಟಿ ಮಾಡಿ ಬರಿ ಚೊಂಬು ನೀಡಿದ್ದರು. 10 ವರ್ಷ ದೇಶವಾಳಿದ ಮೋದಿಯವರು ದೇಶದ ಬಡವರು, ಪರಿಶಿಷ್ಟ ಸಮುದಾಯ, ಹಿಂದುಳಿದವರು, ಸಣ್ಣ-ಸಣ್ಣ ಸಮಾಜವನ್ನು ಮೇಲೆತ್ತುವ ಕೆಲಸವನ್ನು ಮಾಡಿದ್ದಾರೆ. ಅಂತಹ ಮಹಾನುಭಾವ ಮೋದಿ ಎಂದು ಹೇಳುವ ಮೂಲಕ ಕಾಂಗ್ರೆಸ್​ ನಾಯಕರಿಗೆ ತಿರುಗೇಟು ನೀಡಿದರು.

    4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

    ನೀನೆಂದಿಗೂ ನನ್ನ ಜತೆಯಲ್ಲೇ ಇರ್ತೀಯಾ ಮಗನೇ; ಭಾವುಕರಾದ ಶಿಖರ್ ಧವನ್​ಗೆ ಫ್ಯಾನ್ಸ್​ ಆಸರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts