ತುಮಕೂರು: ಬಿಜೆಪಿಯವರು ನನ್ನನ್ನು ಸಿಎಂ ಮಾಡಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಶಿರಾದಲ್ಲಿ ಬುಧವಾರ ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಎಚ್ಡಿಕೆ, ”ಕೇಂದ್ರದಿಂದ ನರೇಂದ್ರ ಮೋದಿ ಅವರೇ ಆಫರ್ ಮಾಡಿದ್ದರು. ಐದು ವರ್ಷ ನಿನ್ನನ್ನು ಯಾರೂ ಟಚ್ ಮಾಡಲ್ಲ ಅಂದಿದ್ದರು. ಕಾಂಗ್ರೆಸ್ನವರ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ರಾಹುಲ್ ಗಾಂಧಿಯಿಂದಲೇ ಹಾಸನದಲ್ಲಿ ಭಾಷಣ ಮಾಡಿಸಿದ್ದರು” ಎಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿರಿ ಶಿರಾ, ರಾಜರಾಜೇಶ್ವರಿ ನಗರಕ್ಕೆ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು?
”ಕಳೆದ ವಿಧಾನಸಭೆ ಫಲಿತಾಂಶ ನೋಡಿ ರಾಜಕೀಯದಿಂದ ನಿರ್ಗಮಿಸಬೇಕು ಅಂದುಕೊಂಡೆ. ಆದ್ರೆ ಕಾಂಗ್ರೆಸ್ನವರು ತರಾತುರಿಯಲ್ಲಿ ದೇವೇಗೌಡರಿಗೆ ಫೋನ್ ಮಾಡಿ ಕರೆದ್ರು. ದೇವೇಗೌಡರು ‘ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ. ನಿಮ್ಮಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಮಾಡಿ’ ಅಂದಿದ್ರು. ಎಷ್ಟೇ ಹೇಳಿದ್ರೂ ಕೇಳದೆ ನನಗೆ ಕಾಂಗ್ರೆಸ್ನವರು ಮುಖ್ಯಮಂತ್ರಿ ಪಟ್ಟ ಕಟ್ಟಿದ್ರು. ನನಗೆ ಸಿಎಂ ಆಗುವ ಆಸೆ ಇರಲಿಲ್ಲ’ ಎಂದು ಎಚ್ಡಿಕೆ ಹೇಳಿದರು.