ಮತ್ತೆ 20 ದಿನ ದೇಶಾದ್ಯಂತ ಕಂಪ್ಲೀಟ್​ ಲಾಕ್​ಡೌನ್​?

blank

ಬೆಂಗಳೂರು: ರಾಜಧಾನಿಯ ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಠ 20 ದಿನ‌ ಸಂಪೂರ್ಣ ಲಾಕ್​ಡೌನ್ ಮಾಡಬೇಕು. ತಪ್ಪಿದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ ಎಂದು ರಾಜ್ಯದ ಮುಖ್ಯಮಂತ್ರಿಗೆ ಎಚ್ಚರಿಸಿದ್ದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಟ್ವೀಟ್​ ಮಾಡಿದ್ದಾರೆ.

ದೇಶದಲ್ಲಿ ಕರೊನಾ ಪ್ರಕರಣ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿರುವ ಎಚ್​ಡಿಕೆ, ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ. 20 ದಿನ ದೇಶದಾದ್ಯಂತ ಮತ್ತೆ ಲಾಕ್​ಡೌನ್ ಘೋಷಿಸಬೇಕು ಎಂದು ಪ್ರಧಾನಿ ಅವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿರಿ video/ ಕರೊನಾ ವಾರ್ಡಿನಲ್ಲಿ ‘ನರಕ’ ದರ್ಶನ, ಶೌಚಗೃಹದ ನೀರನ್ನೇ ಕುಡಿದ ಸೋಂಕಿತರು!

ಸರಣಿ ಟ್ವೀಟ್ ಮಾಡಿರುವ ಎಚ್​ಡಿಕೆ, ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್​ಡೌನ್- ಲಾಕ್​ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಲಾಕ್​ಡೌನ್ ತೆರವುಗೊಳಿಸಿದ ಬಳಿಕ ದೇಶದಲ್ಲಿ ಕರೊನಾ ಪ್ರಕರಣ ಹೆಚ್ಚಾಗುತ್ತಿದೆ. ಹೀಗಾಗಿ ದೇಶದಲ್ಲಿ ಮತ್ತೆ 20 ದಿನ ಲಾಕ್​ಡೌನ್ ಮಾಡಬೇಕು ಎಂದು ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

ಕರೊನಾ ಪ್ರಕರಣ ಹೆಚ್ಚುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಬೆಂಗಳೂರನ್ನು ಮತ್ತೊಂದು ಬ್ರೆಜಿಲ್ ಆಗಲು ಬಿಡಬಾರದು. ಕರೊನಾ ಹರಡುವಿಕೆ ನಿಯಂತ್ರಿಸಲು ಲಾಕ್​ಡೌನ್​ ಆಗಬೇಕಿದೆ. ಬೆಂಗಳೂರನ್ನು ಕೂಡಲೇ ಸಂಪೂರ್ಣ ಲಾಕ್​ಡೌನ್​ ಮಾಡಬೇಕು. ದಿನಗೂಲಿ ಕಾರ್ಮಿಕರು, ಆಟೋ-ಕ್ಯಾಬ್​ ಚಾಲಕರಿಗೆ 5000 ರೂ. ನೀಡುವ ಮೂಲಕ ಅವರ ಕುಟುಂಬಕ್ಕೆ ನೆರವಾಗಬೇಕು ಎಂದು ಸಿಎಂ ಬಿಎಸ್​ವೈ ಅವರನ್ನೂ ಆಗ್ರಹಿಸಿದ್ದಾರೆ.

ಮದುವೆ ಆಗದೆ ವಂಚಿಸಿದ ಪ್ರಿಯಕರನ ವಿರುದ್ಧ 6 ತಿಂಗಳ ಗರ್ಭಿಣಿ ಹೋರಾಟ

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…