93 ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಚ್​ಡಿಕೆ: ರಾಮನಗರ ಸೇರಿ ಹಲವು ಕ್ಷೇತ್ರಗಳು ನಿಗೂಢ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕು, ಸ್ವತಂತ್ರವಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಪಣತೊಟ್ಟಿರುವ ದಳಪತಿಗಳು ಅಳೆದು-ತೂಗಿ, ಒಳ್ಳೆಯ ಮುಹೂರ್ತದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು(ಸೋಮವಾರ) ಬಿಡುಗಡೆ ಮಾಡಿದರು. ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವುದಾಗಿ ಶನಿವಾರ ರಾಮನಗರದಲ್ಲಿ ನಡೆಯುತ್ತಿದ್ದ ಪಂಚರತ್ನ ರಥಯಾತ್ರೆಯಲ್ಲಿ ರಾಮನಗರಕ್ಕೆ ನಿಖಿಲ್​ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಅನಿತಾಕುಮಾರಸ್ವಾಮಿ ಘೋಷಿಸಿದ್ದರು. ಆದರೆ, ಇಂದು ಎಚ್​.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್​ ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ನಿಖಿಲ್​ ಹೆಸರು ಮತ್ತು ರಾಮನಗರ ಕ್ಷೇತ್ರಕ್ಕೆ … Continue reading 93 ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಚ್​ಡಿಕೆ: ರಾಮನಗರ ಸೇರಿ ಹಲವು ಕ್ಷೇತ್ರಗಳು ನಿಗೂಢ