ಮೈಸೂರು: ಕಾಂಗ್ರೆಸ್ಗೆ ಅಲ್ಲ, ಸಿದ್ದರಾಮಯ್ಯಂಗೆ ಪಾಠ ಕಲಿಸೋದೇ ನನ್ನ ಉದ್ದೇಶ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 2018 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಜೆಡಿಎಸ್ ಬಗ್ಗೆ ಅಪಪ್ರಚಾರ ಮಾಡಿ ಅಲ್ಪಸಂಖ್ಯಾತ ಸಮುದಾಯದ ದಿಕ್ಕು ತಪ್ಪಿಸಿದ್ದರು. ಈ ಬಾರಿ ಅಲ್ಪಸಂಖ್ಯಾತ ಸಮುದಾಯದ ಜತೆ ನಾವಿದ್ದೇವೆ ಅಂತ ಸಂದೇಶ ನೀಡುವ ಸಲುವಾಗಿ ನಾವು ಮುಸ್ಲಿಂ ಅಭ್ಯರ್ಥಿಗಳನ್ನು ಹಾಕಿದ್ದೇವೆ ಎಂದರು.
ಉಪಚುನಾವಣೆಯ ಹೊಸ್ತಿಲಲ್ಲಿರುವ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ದಿವಂಗತ ಶಾಸಕ ಮನಗುಲಿ ಅವರ ಪುತ್ರ ಅಶೋಕ್ ಮನಗುಲಿ ಅವರಿಗೆ ಟಿಕೇಟ್ ನೀಡಿದ್ದರೆ, ಹಾನಗಲ್ನಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆಯನ್ನು ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ. ಜೆಡಿಎಸ್ ಎರಡೂ ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ – ಸಿಂದಗಿಯಲ್ಲಿ ನಾಜಿಯಾ ಶಕೀಲ್ ಅಹಮದ್ ಅಂಗಡಿ ಮತ್ತು ಹಾನಗಲ್ನಲ್ಲಿ ನಿಯಾಜ್ ಶೇಖ್ ಜೆಡಿಎಸ್ ಅಭ್ಯರ್ಥಿಗಳಾಗಿದ್ದಾರೆ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಕಾರ್ಯದರ್ಶಿ ಅಧಿಕಾರ ಸ್ವೀಕಾರ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಕೆ, “ಕಾಂಗ್ರೆಸ್ಗಿಂತಲೂ ಸಿದ್ದರಾಮಯ್ಯಗೆ ಪಾಠ ಕಲಿಸಲು ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದೇನೆ. 2018 ರ ಚುನಾವಣೆಯಲ್ಲಿ ಸಿದ್ದರಾಮಯ್ಯರ ಕೆಟ್ಟ ಉದ್ದೇಶ ಗೊತ್ತಾಯ್ತು. ಜೆಡಿಎಸ್ ಬಿಜೆಪಿಯ ಬಿ ಟೀಮ್. ಜೆಡಿಎಸ್ಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ ಅಂತ ಅಪಪ್ರಚಾರ ಮಾಡಿದವರು, ಸಿದ್ದರಾಮಯ್ಯ. ಆ ಮೂಲಕ ಅಲ್ಪಸಂಖ್ಯಾತ ಸಮುದಾಯದ ದಿಕ್ಕು ತಪ್ಪಿಸಿದರು” ಎಂದು ಹೇಳಿದರು. “ಈಗಲೂ ಉಪಚುನಾವಣೆಯಲ್ಲಿ ನೀವೇ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಬಹುದಿತ್ತು. ನಿಮಗೆ ಬೇಡ ಅಂದವರು ಯಾರು?” ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರಿಗೆ ಕುಮಾರಸ್ವಾಮಿ ಬಹಿರಂಗವಾಗಿ ಪ್ರಶ್ನೆ ಹಾಕಿದರು.
ಸರ್ಕಾರಿ ಶಾಲಾ ಶಿಕ್ಷಕರಿಗೇಕೆ ಈ ಕಷ್ಟ? ಸಿಎಂ ಬೊಮ್ಮಾಯಿಗೆ ವಿದ್ಯಾರ್ಥಿನಿ ಪ್ರಶ್ನೆ