ಮೈಸೂರು: ಸಖನಿಲ್ಲದ ಸುಖವೆಲ್ಲಿದೆ? ಹೀಗಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಖನನ್ನು ಹುಡುಕುತ್ತಿದ್ದಾರೆ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಎಚ್.ಡಿ. ಕುಮಾರಸ್ವಾಮಿ ಆಗಾಗ್ಗೆ ಸಖರ ಹುಡುಕಾಟ ನಡೆಸುತ್ತಿರುತ್ತಾರೆ. ಅವರಿಗೆ ಯಾರು? ಯಾವಾಗ? ಸಖ ಆಗುತ್ತಾರೆ ಎಂಬುದು ಗೊತ್ತಿಲ್ಲ. ಸ್ಥಿರತೆ ಸದೃಢತೆಗಾಗಿ ಸಖರ ಹುಡುಕಾಟ ಇರುತ್ತದೆ. ಮುಂದೆ ಯಾರು ಅವರಿಗೆ ಸಖರಾಗುತ್ತಾರೋ ಎಂಬುದೂ ಗೊತ್ತಿಲ್ಲ ಎಂದು ಕಾಲೆಳೆದರು.
ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಬಿಜೆಪಿ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ವಿಶ್ವನಾಥ್, ಕುಮಾರಸ್ವಾಮಿ ರಾಜಕೀಯ ಸ್ಥಿರತೆ ಮತ್ತು ಅಸ್ತಿತ್ವಕ್ಕಾಗಿ ಹುಡುಕಾಡುತ್ತಿದ್ದಾರೆ. ಅಸ್ತಿತ್ವಕ್ಕಾಗಿ ಯಾರಾದರೂ ಸಖ ಬೇಕಲ್ವ? ಎಂದು ಲೇವಡಿ ಮಾಡಿದರು.
ಮೈಸೂರಿನಲ್ಲೂ ಮಂಡ್ಯ ಮಾದರಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಿದೆ. ಕೆ.ಆರ್.ನಗರ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಮೈತ್ರಿ ಪಡೆ ಮೇಲುಗೈ ಸಾಧಿಸಿದೆ. ಬಿಜೆಪಿಯ ಪ್ರಭಾಕರ್ ಜೈನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಜೆಡಿಎಸ್ನ ಮಹೇಶ್ಗೆ ಉಪಾಧ್ಯಕ್ಷ ಸ್ಥಾನ ಸಿಕ್ಕಿದೆ. ಶಾಸಕ ಸಾ.ರಾ.ಮಹೇಶ್ ಮುಂದಾಳತ್ವದಲ್ಲಿ ಮೈತ್ರಿ ನಡೆದಿದೆ.
ನಾನು ಬೀದಿಗೆ ಬಂದಿರುವೆ, ನನ್ನ ಕೈ ಹಿಡಿಯಿರಿ… ಎಂದು ಬೇಡಿದ ಅಖಂಡ ಶ್ರೀನಿವಾಸ ಮೂರ್ತಿ
ರಾತ್ರೋರಾತ್ರಿ ಮನೆಯಲ್ಲೇ ಪತ್ನಿಯನ್ನು ಕೊಚ್ಚಿ ಹಾಕಿದ ಭೂಪ! ಮಗನ ಕೃತ್ಯಕ್ಕೆ ಬೆಚ್ಚಿದ ತಾಯಿಯೂ ಬದುಕಲಿಲ್ಲ