3 ವರ್ಷ ಮ್ಯಾಗಿ ನೂಡಲ್ಸ್ ತಿಂದೇ ಜೀವನ ಸಾಗಿಸಿದ ಅವರಿಬ್ಬರು ಇಂದು ಭಾರತೀಯ ಕ್ರಿಕೆಟ್​ನ ಸೂಪರ್​ಸ್ಟಾರ್ಸ್! Indian Cricket Superstars ​

Indian Cricket Superstars

Indian Cricket Superstars : ಬಡತನದ ಹಿನ್ನೆಲೆಯಿಂದ ಬೆಳೆದು ಕಲೆ, ಕ್ರೀಡೆ ಮತ್ತು ಸಿನಿಮಾ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ ಅನೇಕ ಪ್ರತಿಭೆಗಳು ನಮ್ಮ ಸುತ್ತಲೂ ಇದಾರೆ. ಮುಂಬೈ ಇಂಡಿಯನ್ಸ್ ಮಾಲಕಿ ಮತ್ತು ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಅವರು ಅಂತಹ ಇಬ್ಬರು ಪ್ರತಿಭೆಗಳ ಹೆಸರನ್ನು ಇದೀಗ ಬಹಿರಂಗಪಡಿಸಿದ್ದಾರೆ. ಐಪಿಎಲ್‌ನಲ್ಲಿ ಮಿಂಚಿ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಬಗ್ಗೆ ಮಾತನಾಡಿದ್ದಾರೆ.

ಬೋಸ್ಟನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ್ದರ ಬಗ್ಗೆ ನೀತಾ ಅಂಬಾನಿ ಮುಕ್ತವಾಗಿ ಮಾತನಾಡಿದರು.

ಅಂದು ಕ್ರಿಕೆಟ್ ಶಿಬಿರವೊಂದರಲ್ಲಿ ನಾನು ಮೊದಲು ಇಬ್ಬರನ್ನು ಭೇಟಿಯಾದೆ. ಕಳೆದ ಮೂರು ವರ್ಷಗಳಿಂದ ಹಣವಿಲ್ಲದ ಕಾರಣ ಕೇವಲ ಮ್ಯಾಗಿ ನೂಡಲ್ಸ್ ಮಾತ್ರ ತಿನ್ನುತ್ತಿದ್ದೇವೆ ಎಂದು ಅವರು ನನಗೆ ಹೇಳಿದ್ದರು. ಇದನ್ನು ಕೇಳಿ ನನ್ನ ಮನಸ್ಸಿಗೆ ನೋವಾಯಿತು. ಕ್ರಿಕೆಟ್ ಬಗ್ಗೆ ಅವರಲ್ಲಿದ್ದ ಉತ್ಸಾಹ ಮತ್ತು ಚುರುಕುತನವನ್ನು ನಾನು ಗಮನಿಸಿದೆ. ಅದೇ ಗುಣ ಅವರನ್ನು ಇಂದು ಉನ್ನತ ಸ್ಥಾನಕ್ಕೆ ತೆಗೆದುಕೊಂಡು ಬಂದಿದೆ. ಆ ಇಬ್ಬರು ಯುವಕರು ಬೇರೆ ಯಾರೂ ಅಲ್ಲ, ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಎಂದು ನೀತಾ ಅಂಬಾನಿ ಹೇಳಿದರು.

ಇದನ್ನೂ ಓದಿ: ಹುಟ್ಟುಹಬ್ಬದಂದೇ 7 ಕೋಟಿ ಹಣದೊಂದಿಗೆ ತಮಿಳುನಾಡು ವ್ಯಕ್ತಿಯ ಮನೆಗೆ ಎಂಟ್ರಿ ಕೊಟ್ಟ ಅದೃಷ್ಟ ಲಕ್ಷ್ಮೀ! Luck

ಐಪಿಎಲ್‌ನಲ್ಲಿ ಆಟಗಾರರನ್ನು ಖರೀದಿಸಲು ನಿಗದಿತ ಬಜೆಟ್ ಇದೆ. ಆದ್ದರಿಂದ, ಹೊಸ ಆಟಗಾರರನ್ನು ಹುಡುಕಲು ನಾವು ಹೊಸ ಮಾರ್ಗಗಳನ್ನು ಹುಡುಕಬೇಕಾಗಿತ್ತು. ಅದಕ್ಕಾಗಿ, ನನ್ನ ತಂಡವು ರಣಜಿ ಟ್ರೋಫಿ ಸೇರಿದಂತೆ ದೇಶೀಯ ಕ್ರಿಕೆಟ್ ಪಂದ್ಯಗಳಿಗೆ ಹೋಗುತ್ತಿತ್ತು. ಒಂದು ದಿನ, ನನ್ನ ತಂಡದ ಸದಸ್ಯರು ಇಬ್ಬರು ತೆಳ್ಳಗಿರುವ ಆಟಗಾರರೊಂದಿಗೆ ಶಿಬಿರಕ್ಕೆ ಬಂದಿದ್ದರು ಎಂದು ನೀತಾ ಅಂಬಾನಿ ನೆನಪಿಸಿಕೊಂಡರು.

ಹಾರ್ದಿಕ್ ಪಾಂಡ್ಯ 2015ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದರು. ಮುಂಬೈ ಇಂಡಿಯನ್ಸ್, ಐಪಿಎಲ್ ಹರಾಜಿನಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು 10,000 ಅಮೆರಿಕನ್ ಡಾಲರ್‌ಗೆ ಖರೀದಿಸಿತು. ಮರುವರ್ಷವೇ ಹಾರ್ದಿಕ್, ಭಾರತೀಯ ಕ್ರಿಕೆಟ್‌ನ ಭಾಗವಾದರು. ಇಂದು ಹಾರ್ದಿಕ್​ ಪಾಂಡ್ಯ, ಮುಂಬೈ ಇಂಡಿಯನ್ಸ್‌ನ ಹೆಮ್ಮೆಯ ನಾಯಕ ಎಂದು ನೀತಾ ಅಂಬಾನಿ ಹೇಳಿದರು. (ಏಜೆನ್ಸೀಸ್​)

ಪ್ಯಾರಾಗ್ಲೈಡ್​ನಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ

ಬಿದಿರಿನ ಉಪ್ಪಿನ ಬಗ್ಗೆ ನಿಮಗೆ ತಿಳಿದಿದೆಯೇ? ಇದರ ಬೆಲೆ ಮತ್ತು ಪ್ರಯೋಜನಗಳನ್ನು ಕೇಳಿದ್ರೆ ಅಚ್ಚರಿ ಖಚಿತ! Bamboo Salt

Share This Article

ಕೆಟ್ಟ ಕೊಲೆಸ್ಟ್ರಾಲ್​ ಅನ್ನು ನ್ಯಾಚುರಲ್​ ಆಗಿ ಕಡಿಮೆ ಮಾಡಬೇಕಾ? ಕೇವಲ ಈ ಬದಲಾವಣೆ ಮಾಡಿ ಸಾಕು! Bad cholesterol

Bad cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು.…

ಈ 3 ರಾಶಿಯಲ್ಲಿ ಜನಿಸಿದವರನ್ನು ಶಾಂತಿಯ ಪ್ರತಿರೂಪ ಎಂದು ಹೇಳಲಾಗುತ್ತೆ! ನೀವು ಯಾವ ರಾಶಿಯವರು? Zodiac Signs

Zodiac Signs: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ ಜನಿಸುತ್ತಾನೆ…

Summer Tips: ಬೇಸಿಗೆಯಲ್ಲಿ ಕೆಟ್ಟ ಬೆವರು ವಾಸನೆಯಿಂದ ತೊಂದರೆ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

Summer Tips: ಬೇಸಿಗೆಯಲ್ಲಿ ಬೆವರು ವಾಸನೆಯನ್ನು ತಪ್ಪಿಸಲು, ನೀವು ಪ್ರತಿದಿನ ಸ್ನಾನ ಮಾಡುವುದು ಮತ್ತು ನಿಯಮಿತವಾಗಿ…