More

    ಬರೀ ಐದು ಸಾವಿರ ರೂಪಾಯಿಗೇ ಮರ್ಡರ್​!; ಮತ್ತಲ್ಲಿ ಮತ್ತೇನೋ ಆಯ್ತು…

    ಬೆಂಗಳೂರು: ವರ್ಷಾಂತ್ಯದ ಕೊನೆಯಲ್ಲಿ ಕುಡಿದು ಏನೇನೋ ಸಮಸ್ಯೆ ಎದುರು ಹಾಕಿಕೊಳ್ಳುವವರಿಗೆ ಇದೊಂದು ಎಚ್ಚರಿಕೆಯ ಘಟನೆ ಎಂದರೂ ತಪ್ಪೇನಲ್ಲ. ಸ್ನೇಹಿತರಿಬ್ಬರು ಖುಷಿಗೆಂದು ಮದ್ಯ ಸೇವಿಸಿ ಮಾತಿಗಿಳಿದು ಕೊನೆಗೆ ಒಬ್ಬ ಜೀವ ಕಳೆದುಕೊಂಡರೆ ಮತ್ತೊಬ್ಬ ಪಶ್ಚಾತ್ತಾಪ ಪಡುವಂತಾಗಿದೆ.

    ಮೂರು ತಿಂಗಳಿಂದ ಗುಜರಿ ಅಂಗಡಿಯಲ್ಲಿ ಇರ್ಫಾನ್ ಮತ್ತು ನವೀನ್ ಕೆಲಸ ಮಾಡುತ್ತಿದ್ದು, ಪಟ್ಟೇಗಾರಪಾಳ್ಯದಲ್ಲಿ ನೆಲೆಸಿದ್ದರು. ಮನೆಯಲ್ಲಿ ಸೋಮವಾರ ರಾತ್ರಿ ಇಬ್ಬರೂ ಒಟ್ಟಿಗೆ ಮದ್ಯ ಸೇವಿಸಿದಾಗ ಹಣದ ವಿಷಯ ಪ್ರಸ್ತಾಪವಾಗಿ ಜಗಳ ಶುರುವಾಗಿದೆ. ಬರೀ ಐದು ಸಾವಿರ ರೂಪಾಯಿ ವಿಚಾರವಾಗಿ ಆರಂಭವಾದ ಜಗಳ ಬಳಿಕ ಒಬ್ಬನ ಕೊಲೆಯಲ್ಲಿ ಅಂತ್ಯ ಕಂಡಿದೆ. ವಿಜಯನಗರದ ಪಟ್ಟೇಗಾರಪಾಳ್ಯದ ಇರ್ಫಾನ್ (24) ಕೊಲೆಯಾದ ವ್ಯಕ್ತಿ. ಈ ಘಟನೆ ಸಂಬಂಧ ಆತನ ಗೆಳೆಯ ನವೀನ್‌ನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಇದನ್ನೂ ಓದಿ: ಪ್ರವಾಸಿ ಮಹಿಳೆಯನ್ನೇ ರೇಪ್​ ಮಾಡಿದ ಆಟೋ ಡ್ರೈವರ್​! ಪ್ರಕರಣ ದಾಖಲಾಗಿ 12 ಗಂಟೆಗಳಲ್ಲೇ ಆರೋಪಿ ಸೆರೆ 

    ಮದ್ಯದ ಮತ್ತಿನಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಹಣದ ವಿಷಯವಾಗಿ ಕೆರಳಿದ ನವೀನ್, ಇರ್ಫಾನ್‌ಗೆ ಚಾಕುವಿನಿಂದ ಇರಿದಿದ್ದಾನೆ. ಚೀರಾಟ ಕೇಳಿ ಇರ್ಫಾನ್​ ಮನೆಗೆ ಸ್ಥಳೀಯರು ಬಂದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ. ಕೃತ್ಯ ಎಸಗಿದ ಬಳಿಕ ನವೀನ್ ಪರಾರಿಯಾಗಿದ್ದ. ಘಟನೆ ಕುರಿತು ಮಾಹಿತಿ ತಿಳಿದು ಆರೋಪಿ ಬಂಧನಕ್ಕೆ ಬಲೆಬೀಸಿದಾಗ ವಿಜಯನಗರ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಟಿಂಡರ್​ನಲ್ಲಿ ಪರಿಚಯವಾದ ಯುವತಿಯನ್ನು ರೇಪ್​ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

    ‘ಸೆಕ್ಸ್​ಪರ್ಟ್’​ ಇನ್ನಿಲ್ಲ: ಇವರಿದ್ದಾಗ ಸಿಕ್ಕಿತ್ತು ಅದೆಷ್ಟೋ ಮಂದಿಗೆ ಸಾಂತ್ವನ-ಸಮಾಧಾನ…

    ಮದ್ವೆಯಾದ ಎರಡೇ ತಿಂಗಳಿಗೆ 51 ವರ್ಷದ ಪತ್ನಿಗೆ ಸಾವಿನ ದಾರಿ ತೋರಿದ 29ರ ಪತಿ: ಕೊಲೆ ಹಿಂದೆ ಭಯಾನಕ ಸಂಚು!

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts