ಒಬ್ಬನಿಗೆ ಅಪ್ಪ-ಅಮ್ಮನ ಬಗ್ಗೆ ಪ್ರೀತಿ, ಇನ್ನೊಬ್ಬನಿಗೆ ದ್ವೇಷ; ಇಬ್ಬರೂ ಸೇರಿ ಮಾಡಿದ್ರು ಬ್ಯಾಂಕ್ ಲೂಟಿ!

blank

ನವದೆಹಲಿ: ಅಪ್ಪ-ಅಮ್ಮನನ್ನು ಮೆಚ್ಚಿಸುವ ಸಲುವಾಗಿ ಯುವಕನೊಬ್ಬ ಬ್ಯಾಂಕ್ ಲೂಟಿ ಮಾಡಿದ್ದು, ಆತನಿಗೆ ಅಪ್ಪ-ಅಮ್ಮನ ವಿರುದ್ಧ ಸೇಡು ತೀರಿಸಿಕೊಳ್ಳಬೇಕು ಎಂಬ ಉದ್ದೇಶವಿದ್ದ ಇನ್ನೊಬ್ಬ ಕೈಜೋಡಿಸಿದ್ದಾನೆ. ಕೊನೆಗೆ ಇವರಿಬ್ಬರೂ ತಾವಂದುಕೊಂಡಿದ್ದನ್ನು ಮಾಡುವುದರಲ್ಲಿ ಯಶಸ್ವಿಯಾಗಿದ್ದರೂ, ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ.

ಹದಿನೆಂಟು ವರ್ಷದ ಅಜಯ್ ಬಜಾರೆ ಹಾಗೂ ಪ್ರದೀಪ್ ಠಾಕೂರ್ ಎಂಬಿಬ್ಬರು ಜೊತೆಯಾಗಿ ಈ ಲೂಟಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾರಾಷ್ಟ್ರದ ಇಂದಿರಾಗಾಂಧಿ ನಗರದ ಬರಾನಲ್ ಸ್ಕ್ವೇರ್​ನಲ್ಲಿರುವ ಕೋ-ಆಪರೇಟಿವ್ ಬ್ಯಾಂಕೊಂದರಲ್ಲಿ ಇವರಿಬ್ಬರೂ ಸೇರಿ 4.78 ಲಕ್ಷ ರೂಪಾಯಿ ಲೂಟಿ ಮಾಡಿದ್ದಾರೆ.

ಇದನ್ನೂ ಓದಿ: ಸೀಟ್​​ ಹಿಂದಿನಿಂದ ಕೈ ತೂರಿಸಿ ಅಲ್ಲೇ ಮುಟ್ಟಲು ಯತ್ನಿಸುತ್ತಿದ್ದ; ಅಸಹ್ಯ ಅನುಭವ ಬಿಚ್ಚಿಟ್ಟ ಯುವತಿ

ತನಗೆ ಭಾರಿ ಸಂಪಾದನೆ ಇದೆ ಎಂದು ಅಪ್ಪ-ಅಮ್ಮನನ್ನು ಮೆಚ್ಚಿಸುವ ಸಲುವಾಗಿ ಅಜಯ್​, ಪ್ರದೀಪ್ ಜತೆ ಸೇರಿ ಈ ಕೃತ್ಯ ಎಸಗಿದ್ದಾನೆ. ಮಾತ್ರವಲ್ಲ ಲೂಟಿಯ ಹಣದಲ್ಲಿ ಅಮ್ಮನಿಗೆ 50 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕೊಡಿಸಿದ್ದರೆ, ಅಪ್ಪನಿಗೆ 40 ಸಾವಿರ ರೂ. ಕೊಟ್ಟು ಒಂದು ಸೆಕೆಂಡ್ ಹ್ಯಾಂಡ್ ಕಾರ್ ಕೊಡಿಸಿದ್ದಾನೆ.

ಇದನ್ನೂ ಓದಿ: ಆ ಭಾಗ ಸ್ವಲ್ಪ ಕಾಣಿಸ್ತಿದೆ ಅಂತ ಜಿಮ್​ನಿಂದ್ಲೇ ಹೊರಗೆ ಕಳಿಸಿದ್ರಂತೆ!; ಅವಮಾನ ಆಯಿತೆಂದು ವಿಡಿಯೋ ಮಾಡಿ ಅತ್ತಳು…

ಇನ್ನು ಇವನಿಗೆ ಸಹಕರಿಸಿರುವ ಪ್ರದೀಪ್ ಕಥೆಯೇ ಬೇರೆ. ಈತ ಚಿಕ್ಕಂದಿನಲ್ಲೇ ಅಪ್ಪ-ಅಮ್ಮನಿಂದ ಪರಿತ್ಯಕ್ತನಾಗಿದ್ದು, ಅವರ ಮೇಲಿನ ಸೇಡಿಗೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಹಣ ಕದ್ದ ಬಳಿಕ ಇಬ್ಬರೂ ಎರಡು ಹೊಸ ಮೊಬೈಲ್ ಫೋನ್ ಖರೀದಿಸಿ ರಾಜಸ್ಥಾನಕ್ಕೆ ಪರಾರಿಯಾಗಲು ಯತ್ನಿಸಿದ್ದರು. ಆದರೆ ತನಿಖೆಗಿಳಿದಿದ್ದ ಪೊಲೀಸರು ಇವರ ಜಾಡು ಹಿಡಿದು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ಬರೀ 2 ಲಕ್ಷ ರೂ. ಮೌಲ್ಯದ ನಗ-ನಗದನ್ನು ಪೊಲೀಸರು ವಶಪಡಿಸಿಕೊಳ್ಳಲು ಸಾಧ್ಯವಾಗಿದ್ದು, ಉಳಿದುದನ್ನು ಅವರು ಖರ್ಚು ಮಾಡಿದ್ದರು. (ಏಜೆನ್ಸೀಸ್)

ತಮ್ಮನ ಮದ್ವೆಗಾಗಿ 2 ದಿನ ರಜೆ ತೆಗೆದುಕೊಳ್ಳಲಿಕ್ಕೂ ಪತ್ರ ಬರೆದು ಕೋರಿಕೊಂಡ ಗ್ರಾಮ ಪಂಚಾಯತ್ ಸದಸ್ಯ!

ಈ ರೋಗ ಮಕ್ಕಳಲ್ಲಿ ಕಂಡುಬಂದಿರುವುದು ಇದೇ ಮೊದಲು!; ಇದರಲ್ಲಿ ಶೇ. 60ರಷ್ಟಿದೆ ಸಾವಿನ ಸಾಧ್ಯತೆ!

43 ಸಲ ಪಾಸಿಟಿವ್​, 7 ಬಾರಿ ಆಸ್ಪತ್ರೆಗೆ ದಾಖಲು; ಈತ ಜಗತ್ತಲ್ಲೇ ಅತಿ ಹೆಚ್ಚು ದಿನ ಕೋವಿಡ್​ನಿಂದ ಬಳಲಿದ ವ್ಯಕ್ತಿ!

Share This Article

ಈ ಗುಣಗಳನ್ನು ಹೊಂದಿರುವ ಜನರು ತಮ್ಮ ಜೀವನದುದ್ದಕ್ಕೂ ಶ್ರೀಮಂತರಾಗಿರುತ್ತಾರೆ..ಯಾಕೆ ಗೊತ್ತಾ?Chanakya Niti

Chanakya Niti: ಆಚಾರ್ಯ ಚಾಣಕ್ಯ ಅವರನ್ನು ಅವರ ಕಾಲದ ಅತ್ಯಂತ ಬುದ್ಧಿವಂತ ವ್ಯಕ್ತಿ ಎಂದೂ ಕರೆಯಲಾಗುತ್ತದೆ.…

ಬೇಸಿಗೆಯಲ್ಲಿ ತೆಂಗಿನಕಾಯಿ ನೀರು ಅಥವಾ ಕಬ್ಬಿನ ಜ್ಯೂಸ್​ ಯಾವುದು ಉತ್ತಮ! | Better In Summer

Better In Summer ; ಈ ಬಿರು ಬೇಸಿಗೆಯಲ್ಲಿ ಸಾಮಾನ್ಯವಾಗಿ ತಂಪಾದ ಅಥವಾ ಅಹ್ಲಾದಕಾರ ಆಹಾರ…

ಈ ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯಬೇಡಿ! ಅಕಸ್ಮಾತ್​ ನೀರು ಕುಡಿದ್ರೆ ಏನಾಗುತ್ತದೆ ಗೊತ್ತಾ? Fruits

Fruits: ಕೆಲವು ಸಂದರ್ಭಗಳಲ್ಲಿ, ಕೆಲವು ಹಣ್ಣುಗಳನ್ನು ತಿಂದ ನಂತರ ನೀರು ಕುಡಿಯುವುದರಿಂದ ಅತಿಸಾರದ ಅಪಾಯ ಹೆಚ್ಚಾಗುತ್ತದೆ.…