ನವದೆಹಲಿ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಇಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಸಾವಿಗೆ ಬಾಲಿವುಡ್ ಹಾಗೂ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.
ಹಲವು ಸಚಿವರು, ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಟ್ವೀಟ್ ಮಾಡುವ ಮೂಲಕ ರಿಷಿ ಕಪೂರ್ಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಟ್ವೀಟ್ ಮಾಡಿ, ರಿಷಿ ಕಪೂರ್ ನಿಧನಕ್ಕೆ ನೋವು ವ್ಯಕ್ತಪಡಿಸಿದ್ದಾರೆ.
ಬಹುಮುಖ ಪ್ರತಿಭೆ, ಪ್ರೀತಿ, ಉಲ್ಲಾಸ..ಈ ಮೂರರ ಸಮ್ಮಿಳತಕ್ಕೆ ಇರುವ ಹೆಸರೇ ರಿಷಿ ಕಪೂರ್ ಜೀ. ಅವರು ಪ್ರತಿಭೆಯ ಶಕ್ತಿಕೇಂದ್ರವಾಗಿದ್ದರು. ನಾನು ಅವರೊಂದಿಗೆ ನಡೆಸಿದ ಮಾತುಕತೆಯನ್ನು ಸದಾ ನೆನಪಿಸಿಕೊಳ್ಳುತ್ತೇನೆ.
ನಮ್ಮಿಬ್ಬರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲೂ ಪರಸ್ಪರ ಮಾತುಕತೆ ನಡೆಯುತ್ತಿತ್ತು. ರಿಷಿ ಕಪೂರ್ ಅವರು ಚಲನಚಿತ್ರಗಳಲ್ಲಿ ಮತ್ತು ಭಾರತದ ಅಭಿವೃದ್ಧಿ ಬಗ್ಗೆ ತುಂಬ ಆಸಕ್ತಿ ಹೊಂದಿದ್ದರು. ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಸಾಂತ್ವನಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್)