ಬೆಂಗಳೂರು: ಅಪರಾಧ ಪ್ರಕರಣದಲ್ಲಿ ಜಪ್ತಿಯಾಗಿದ್ದ ದ್ವಿಚಕ್ರ ವಾಹನ ಬಿಡುಗಡೆಗೆ ಲಂಚ ಪಡೆಯುತ್ತಿದ್ದ ಹೆಡ್ ಕಾನ್ಸ್ಟೆಬಲ್, ಲೋಕಾಯುಕ್ತ ಬಲೆಗೆ ಸಿಲುಕಿದ್ದಾನೆ.
ಹನುಮಂತನಗರ ಪೊಲೀಸ್ ಠಾಣೆ ಹೆಡ್ಕಾನ್ಸ್ಟೆಬಲ್ ಕವಿನ್ ಬಂಧಿತ. ಅಪರಾಧ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ವಾರಸುದಾರರಿಗೆ ಹಿಂತಿರುಗಿಸಲು 25 ಸಾವಿರ ರೂ.ಗೆ ಬೇಡಿಕೆ ಒಡ್ಡಿದ್ದ. ಕೊನೆಗೆ ಚೌಕಾಸಿ ಮಾಡಿ 20 ಸಾವಿರ ರೂ.ಗೆ ಒಪ್ಪಿಕೊಂಡಿದ್ದ. ಇದರಿಂದ ನೊಂದ ವಾಹನ ವಾರಸುದಾರ ಶಿವಕುಮಾರ್, ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದ.
ಪ್ರಕರಣ ದಾಖಲು ಮಾಡಿಕೊಂಡ ಡಿವೈಎಸ್ಪಿ ಉಮಾದೇವಿ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು ಬುಧವಾರ ದೂರುದಾರನಿಂದ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ಟೆಬಲ್ನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದೆ. ಈ ಪ್ರಕರಣದಲ್ಲಿ ಇನ್ಸ್ಪೆಕ್ಟರ್ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.