ನವದೆಹಲಿ: ಆಘಾತಕಾರಿ ಘಟನೆ ಒಂದರಲ್ಲಿ ಪೊಲೀಸ್ ಅಧಿಕಾರಿ ಹಾಗೂ ಅವರ ಗರ್ಭಿಣಿ ಪತ್ನಿ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಘಟನೆಯೂ ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದ್ದು ಸದ್ಯ ಪೊಲೀಸ್ ಅಧಿಕಾರಿ ಹಾಗು ಆತನ ಪತ್ನಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಹಣ ದೋಚಿದ ಖದೀಮರು
ಘಟನೆಯೂ ಶುಕ್ರವಾರ ರಾತ್ರಿ 9:45ರ ಸುಮಾರಿಗೆ ನಡೆದಿದ್ದು ಬುರಾರಿಯಿಂದ ಜಹಾಂಗೀರ್ಪುರಿ ಕಡೆಗೆ ತನ್ನ ಪತ್ನಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.
ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಂಪತಿಗಳ ಮೇಲೆ ಗುಂಡು ಹಾರಿಸಿ ಅವರ ಬಳಿ ಇದ್ದ ಮೊಬೈಲ್ ಪೋನುಗಳು ಹಾಗು 7,000 ಸಾವಿರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ.
ಪ್ರಾಣಪಾಯದಿಂದ ಪಾರು
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ದಂಪತಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿ ಹೊಟ್ಟೆಯ ಭಾಗ ಹಾಗೂ ಅವರ ಪತ್ನಿಗೆ ಗಲ್ಲದ ಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.