More

    ಮಂಗಳೂರಿನ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ವೈದ್ಯಕೀಯ ಶಿಬಿರ

    ಮಂಗಳೂರು : ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ವತಿಯಿಂದ ಫಾದರ್ ಮುಲ್ಲರ್‌ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಹಯೋಗದಲ್ಲಿ ಮಂಗಳೂರಿನ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ವೈದ್ಯಕೀಯ ಶಿಬಿರ ನಡೆಯಿತು.
    ಶಿಬಿರ ಉದ್ಘಾಟಿಸಿದ ಸಂತ ಅಲೋಶಿಯಸ್ ಪರಿಗಣಿತ ವಿ.ವಿ.ಯ ಕುಲಪತಿ ಡಾ. ಪ್ರವೀಣ್ ಮಾರ್ಟಿಸ್ ಮಾತನಾಡಿ ‘ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಭವಿಷ್ಯದಲ್ಲೂ ಇಂತಹ ಶಿಬಿರ ಆಯೋಜಿಸಲಾಗುವುದು ಎಂದರು
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರಾಗೃಹದ ಅಧೀಕ್ಷಕ ಓಬಳೇಶ್ವರ ಮಾತನಾಡಿ ‘ ಜೈಲಿನ ಕೈದಿಗಳ ಮಾನಸಿಕ ಆರೋಗ್ಯ ಮತ್ತು ದೈಹಿಕ ಸ್ವಾಸ್ಥೃವನ್ನು ಕಾಪಾಡಿಕೊಳ್ಳಲು ವೈದ್ಯಕೀಯ ಶಿಬಿರ ನೆರವಾಗುತ್ತದೆ ಎಂದರು
    ಸಂತ ಅಲೋಶಿಯಸ್ ಪರಿಗಣಿತ ವಿ.ವಿ.ಯ ಕುಲ ಸಚಿವ ಡಾ.ಅಲ್ವಿನ್ ಡೇಸಾ, ಫಾ.ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಿಬ್ಬಂದಿ ಡಾ .ಕೆಲ್ವಿನ್ ಮತ್ತು ಕ್ಯಾರೊಲಿನ್ ಉಪಸ್ಥಿತರಿದ್ದರು. ಕಾರಾಗೃಹದ ಜೈಲರ್ ರಾಜೇಂದ್ರ ಕಾಪಾಡೆ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕ ಪ್ರೊ. ಎಡ್ಮಂಡ್ ಫ್ರಾಂಕ್ ವಂದಿಸಿದರು. ಉಪನ್ಯಾಸಕ ಶರತ್ ಕುಮಾರ್ ಶೆಟ್ಟಿ ಕಾರ್ಯಕ್ರಮ
    ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts