More

    ಉಚಿತ ತಪಾಸಣಾ ಶಿಬಿರ

    ಚನ್ನರಾಯಪಟ್ಟಣ : ಗ್ರಾಮೀಣ ಜನರ ಸ್ವಾಸ್ಥೃ ಜಾಗೃತಿಗೆ ಉಚಿತ ತಪಾಸಣಾ ಶಿಬಿರಗಳು ಸಹಕಾರಿಯಾಗಿವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ಪ್ರಸನ್ನಗಣಪತಿ ಆಸ್ಥಾನ ಮಂಟಪದಲ್ಲಿ ಎಂ.ಎ. ಗೋಪಾಲಸ್ವಾಮಿ ಅವರ 53ನೇ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಬೃಹತ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
    ಗ್ರಾಮೀಣ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು. ತಜ್ಞರು ಲಭ್ಯವಿರುವ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಬಡತನದ ಪರಿಚಯವೂ ನನಗೆ ಇರುವ ಕಾರಣ ಜನಸೇವೆಗೆ ಮುಂದಾಗಿದ್ದೇನೆ ಎಂದರು.
    ತಜ್ಞ ಡಾ. ನಾಗೇಶ್ ಮಾತನಾಡಿದರು. ಸಾವಿರಕ್ಕೂ ಹೆಚ್ಚು ರೋಗಿಗಳನ್ನು ತಪಾಸಣೆ ಮಾಡಲಾಯಿತು.
    ಪ್ರಸನ್ನಗಣಪತಿ ಸೇವಾ ಸಮಿತಿ ಗೌರವಾಧ್ಯಕ್ಷ ಕೃಷ್ಣಪ್ಪ, ಅಧ್ಯಕ್ಷ ಸಿ.ಎನ್. ಅಶೋಕ್, ಟೈಮ್ಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಗಂಗಾಧರ, ಹಿರಿಸಾವೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ಮುಖಂಡರಾದ ಅಣತಿ ಚಂದ್ರಶೇಖರ, ಕುಮಾರಣ್ಣ, ಧರ್ಮೇಂದ್ರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts