ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುತ್ತಿದ್ದರೆ ಆರೋಗ್ಯ ಇಲಾಖೆ ಅಧಿಕಾರಿ​ ಲಂಚ ಸಂಗ್ರಹಿಸುತ್ತಿದ್ರು; ಕಾರಿನಲ್ಲಿ ಕಂತೆ ಕಂತೆ ಹಣ!

blank

ಬಾಗಲಕೋಟೆ: ರಾಜ್ಯಾದ್ಯಂತ ಕರೊನಾ ಸೋಂಕಿತರನೇಕರು ಬೆಡ್​ ಸಿಗುತ್ತಿಲ್ಲ, ಐಸಿಯು ಖಾಲಿ ಇಲ್ಲ, ಕಡೇಪಕ್ಷ ಅಗತ್ಯ ತುರ್ತು ಚಿಕಿತ್ಸೆಯೂ ಸಿಗುತ್ತಿಲ್ಲ ಎಂದು ಆಸ್ಪತ್ರೆಗಳಲ್ಲಿ ನರಳಾಡುತ್ತಿದ್ದಾರೆ, ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಆದರೆ ಆರೋಗ್ಯ ಇಲಾಖೆಯ ಕ್ಲರ್ಕ್​ ಒಬ್ಬರು ಇಂಥ ಸಂದರ್ಭದಲ್ಲೂ ಲಂಚ ಸಂಗ್ರಹದಲ್ಲಿ ತೊಡಗಿದ್ದ ಅಮಾನವೀಯ ಪ್ರಕರಣ ಕಂಡುಬಂದಿದೆ.

ಕರೊನಾ ಸಂಕಷ್ಟದ ಸಂದರ್ಭದಲ್ಲಿ ಲಂಚದ ಹಣ ಸಂಗ್ರಹಿಸುತ್ತಿದ್ದ ಆರೋಗ್ಯ ಇಲಾಖೆಯ ಎಫ್​ಡಿಎ ಕೊನೆಗೂ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಮಹಾಂತೇಶ್ ನಿಡಸನೂರ ಬಂಧಿತ ಅಧಿಕಾರಿ. ಇವರು ಲಂಚ ಸಂಗ್ರಹದಲ್ಲಿ ತೊಡಗಿದ್ದ ಕುರಿತು ಖಚಿತ ಮಾಹಿತಿ ಪಡೆದ ಎಸಿಬಿ ಅಧಿಕಾರಿಗಳು, ದಾಳಿ ನಡೆಸಿ ಬಂಧಿಸಿದ್ದಾರೆ.

ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುತ್ತಿದ್ದರೆ ಆರೋಗ್ಯ ಇಲಾಖೆ ಅಧಿಕಾರಿ​ ಲಂಚ ಸಂಗ್ರಹಿಸುತ್ತಿದ್ರು; ಕಾರಿನಲ್ಲಿ ಕಂತೆ ಕಂತೆ ಹಣ!

ಇವರು ಜಿಲ್ಲೆಯಲ್ಲಿರುವ ಆರೋಗ್ಯ ಇಲಾಖೆಯ ವಿವಿಧ ಕಚೇರಿಗಳಿಂದ ಪರ್ಸೆಂಟೇಜ್ ಆಧಾರದಲ್ಲಿ ಲಂಚದ ಹಣ ಸಂಗ್ರಹಿಸುತ್ತಿದ್ದರು. ಪ್ರಯಾಣ ಭತ್ಯೆ ಮಂಜೂರು ಸಂಬಂಧ ಈ ಲಂಚ ಸ್ವೀಕರಿಸಲಾಗುತ್ತಿದ್ದು, ಆ ಹಣವನ್ನು ಕಾರಿನಲ್ಲಿ ತರುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಬಾಗಲಕೋಟೆ ನವನಗರ ಬಳಿ ಎಸಿಬಿ ಅಧಿಕಾರಿಗಳು ಕಾರನ್ನು ತಡೆದು ಪರಿಶೀಲಿಸಿದಾಗ, ಕಾರಿನಲ್ಲಿ 5 ಲಕ್ಷದ 8 ಸಾವಿರ ರೂಪಾಯಿ ಪತ್ತೆ ಆಗಿತ್ತು. ಅಲ್ಲದೆ ಪ್ರಯಾಣ ಭತ್ಯೆ ಬಿಲ್​ಗಳೂ ಪತ್ತೆಯಾಗಿವೆ. ಎಸಿಬಿ ಇನ್​ಸ್ಪೆಕ್ಟರ್ ಸಮೀರ್ ಮುಲ್ಲಾ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಬಾಗಲಕೋಟೆ ಎಸಿಬಿ ಕಚೇರಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುತ್ತಿದ್ದರೆ ಆರೋಗ್ಯ ಇಲಾಖೆ ಅಧಿಕಾರಿ​ ಲಂಚ ಸಂಗ್ರಹಿಸುತ್ತಿದ್ರು; ಕಾರಿನಲ್ಲಿ ಕಂತೆ ಕಂತೆ ಹಣ!
ಅಧಿಕಾರಿ ಲಂಚದ ಹಣ ಕೊಂಡೊಯ್ಯುತ್ತಿದ್ದ ಕಾರು

ಉಸಿರುಗಟ್ಟಿ ನರಳಾಡಿದ ಕೋವಿಡ್​ ಸೋಂಕಿತ; ಮಾಧ್ಯಮದವರಿಗೆ ತಿಳಿಸುತ್ತೇವೆ ಎಂದ ಮೇಲೆ ಆಸ್ಪತ್ರೆಗೆ ದಾಖಲಿಸಿಕೊಂಡ ಸಿಬ್ಬಂದಿ

ಕಸ ಹಾಕುವ ಜಾಗವೇ ಮಸಣ; ಹೆಣ ಸುಡಲು ಸ್ಥಳವಿಲ್ಲದೆ ತಿಪ್ಪೆಗುಂಡಿಯಲ್ಲೇ ಅಂತ್ಯಸಂಸ್ಕಾರ!

Share This Article

Tea….ಒಂದು ತಿಂಗಳು ಟೀ ಕುಡಿಯುವುದನ್ನು ಬಿಟ್ಟರೆ ಏನಾಗುತ್ತೆ ಗೊತ್ತಾ?

Tea: ಬೆಳಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ಟೀ ಕುಡಿದರೆ ಸಿಗುವ ಸಂತೋಷ ಅಷ್ಟಿಷ್ಟಲ್ಲ. ಹಾಗಿದ್ದರೂ,…

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…