ಚಿಕ್ಕೋಡಿ: ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕರೊನಾ ಯೋಧರಿಗಾಗಿ ಒಪ್ಪೊತ್ತಿನ ಉಪಾವಾಸ ಮಾಡಲು ಕರೆ ನೀಡಿದ್ದರು. ಅವರ ಕರೆಗೆ ಓಗೊಟ್ಟು ನಾನು ಸಹ ಉಪವಾಸ ಮಾಡಿದ್ದೇನೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ.
ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಸೋಮವಾರ ಪಟ್ಟಣದ ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕರೊನಾ ನಿಯಂತ್ರಿಸಲು ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಕಾರ್ಯಕ್ಕೆ ನಿಜಕ್ಕೂ ಸಲಾಂ ಹೇಳಲೇಬೇಕು ಎಂದರು. ಸಚಿವೆ ಶಶಿಕಲಾ ಜೊಲ್ಲೆ, ಆರ್ಎಸ್ಎಸ್ ಪ್ರಮುಖ ಸಂಜಯ ಅಡಕೆ, ಉದ್ಯಮಿ ಸಂಜಯ ಅರಗೆ ಇತರರು ಉಪಸ್ಥಿತರಿದ್ದರು.