ಗದಗ: ಎಲ್ಲಾ ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಪ್ರತಿ ವರ್ಷ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಅವಶ್ಯವಾಗಿದೆ ಎಂದು ಸಿ.ಎಚ್.ಓ. ಡಾ. ಚಂದ್ರು ಹೇಳಿದರು.
ಗುರುವಾರ ತಾಲೂಕಿನ ಕೋಟುಮಚಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರಾಯಣಪುರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣೆಯಲ್ಲಿ ಬಾಗವಹಿಸಿ ಮಾತನಾಡಿದರು.
ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರು ತಮ್ಮ ಯಾವುದೇ ಸಮಸ್ಯೆಗಳು ಇದ್ದಲ್ಲಿ ಸರ್ಕಾರದಿಂದ ಆಯೋಜನೆ ಮಾಡಿರುವ ಉಚಿತ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಈ ಆರೋಗ್ಯ ತಪಾಸಣೆಯಲ್ಲಿ 38 ಜನರು ಭಾಗವಹಿಸಿದ್ದರು.
ಎಂ.ಆರ್.ಡಬ್ಲೂ ಖಾಜಾಹುಸೇನ ಕಾತರಕಿ, ರಾಜೇಸಾಬ ನದಾ, ವಿದ್ಯಾ ಕಿತ್ತೂರ, ಶೀಲಾ ಮಳೇಕರ, ಬಿ. ಸಿ. ಹಿರೇಹಾಳ, ಎಸ್. ಬಿ. ಗಡಾದ, ಎಲ್. ಸಿ. ಜೋಶಿ ಇತರರು ಇದ್ದರು.