ಕೋಟ: ಹರ್ತಟ್ಟುವಿನ ಕಲ್ಲಟ್ಟು ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ದೇಗುಲ ಆಡಳಿತ ಮಂಡಳಿ ಅಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೋಟ ಅಮೃತೇಶ್ವರಿ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್.ಸಿ.ಕುಂದರ್ ಉದ್ಘಾಟಿಸಿದರು. ದೇಗುಲ ಅಭಿವೃದ್ಧಿ ಕಾರ್ಯದಲ್ಲಿ ಆರ್ಥಿಕ ಸಹಕಾರ ನೀಡಿದ ಇಂದ್ರಪ್ರಸ್ಥ ಪ್ರಕಾಶ ಮಯ್ಯ ದಂಪತಿ ಹಾಗೂ ಕೋಟ ಅಮೃತೇಶ್ವರಿ ದೇಗುಲ ಆಡಳಿತ ಮಂಡಳಿ ಅಧ್ಯಕ್ಷ ಆನಂದ್.ಸಿ.ಕುಂದರ್ ಅವರನ್ನು ಸನ್ಮಾನಿಸಲಾಯಿತು.

ಕೋಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ.ಬಿ.ಶೆಟ್ಟಿ, ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯರಾದ ಅಜಿತ್ ದೇವಾಡಿಗ, ಉದ್ಯಮಿ ಸುಬ್ರಾಯ ಆಚಾರ್, ಗುತ್ತಿಗೆದಾರ ರಾಜು ಪೂಜಾರಿ, ಕೋಟ ಅಮೃತೇಶ್ವರಿ ದೇಗುಲ ಟ್ರಸ್ಟಿ ರತನ್ ರಾಮದೇವ ಐತಾಳ್, ಮಂಡಳಿ ಉಪಾಧ್ಯಕ್ಷ ಶೇಖರ್ ದೇವಾಡಿಗ, ಕಾರ್ಯದರ್ಶಿ ಹರೀಶ್ ದೇವಾಡಿಗ, ಸಮಿತಿ ಪ್ರಮುಖರಾದ ತಿಮ್ಮ ಕಾಂಚನ್, ನಾಗರಾಜ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ದೀಪಿಕಾ ರವಿ ಹಾಡಿಕೆರೆ ಸ್ವಾಗತಿಸಿದರು.