More

    ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು..!

    ಚಿಕ್ಕಮಗಳೂರು: ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉರುಳಿಬಿದ್ದ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ನಡೆದಿದೆ.

    ಕ್ವಾಲೀಸ್ ಕಾರು ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿತ್ತು. ಬೆಳಗ್ಗೆಯಿಂದ ಈ ಭಾಗದಲ್ಲಿ ಅಬ್ಬರದ ಮಳೆಯಾಗುತ್ತಿರುವುದರಿಂದ ಜಾವಳಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಒಮ್ಮೆಲೆ ಹರಿಯುವ ನೀರಿನ ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್​ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್​ ಆಗಿದ್ದಾರೆ.

    ಇದನ್ನೂ ಓದಿ: ಪಾಕ್​ ಗಡಿಯಿಂದ ಭಾರತಕ್ಕೆ ನುಸುಳಿತು ಡ್ರಗ್ಸ್​! ವಶಕ್ಕೆ ಪಡೆದ ಯೋಧರು

    ಇನ್ನು ಇದೇ ಸ್ಥಳದಲ್ಲಿ ಒಂದೇ ತಿಂಗಳಲ್ಲಿ ಮೂರು ಅಪಘಾತಗಳಾಗಿವೆ. ತಡೆಗೋಡೆ ಇಲ್ಲದಿರುವುದು ಅಪಾಘಾತಗಳಿಗೆ ಕಾರಣವೆಂದು ತಿಳಿದಿದ್ದರು. ಸರಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. (ದಿಗ್ವಿಜಯ ನ್ಯೂಸ್​)

    ನಿಮ್ಮ ಕಣ್ಣಿಗೊಂದು ಸವಾಲ್: ಈ ಚಿತ್ರದಲ್ಲಿ ಅಡಗಿ ಕುಳಿತಿರೋ ಬೆಕ್ಕನ್ನು ಗುರುತಿಸಿದ್ರೆ ನೀವೇ ಗ್ರೇಟ್​!​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts